Friday, June 27, 2025
Homeಕರಾವಳಿಬೆಳ್ತಂಗಡಿ : ಬಿಜೆಪಿ ರಾಜಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗೂ ತಟ್ಟಿದ ಚುನಾವಣಾ ನೀತಿ ಸಂಹಿತೆ...

ಬೆಳ್ತಂಗಡಿ : ಬಿಜೆಪಿ ರಾಜಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗೂ ತಟ್ಟಿದ ಚುನಾವಣಾ ನೀತಿ ಸಂಹಿತೆ ; ಚಾರ್ಮಾಡಿಯಲ್ಲಿ ಕಾರನ್ನು ತಡೆದು ಪರಿಶೀಲನೆ ಮಾಡಿದ ಚುನಾವಣಾಧಿಕಾರಿಗಳು

spot_img
- Advertisement -
- Advertisement -

ಬೆಳ್ತಂಗಡಿ : ಚುನಾವಣಾ ನೀತಿ ಸಂಹಿತೆ ಬಿಸಿ ಕರ್ನಾಟಕ ರಾಜ್ಯದ ಬಿಜೆಪಿ ರಾಜಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಗೂ ತಟ್ಟಿದೆ. ಕಾರಿನಲ್ಲಿ ಪ್ರಯಾಣಸುತ್ತಿದ್ದಾಗ ಚುನಾವಣಾಧಿಕಾರಿಗಳು ಚಾರ್ಮಾಡಿ  ಚೆಕ್ ಪೋಸ್ಟ್ ನಲ್ಲಿ ತಡೆದು ಕಾರು ಪರಿಶೀಲನೆ ನಡೆಸಿ ನಂತರ ಪ್ರಯಾಣಕ್ಕೆ ಅನುವು ಮಾಡಿಕೊಟ್ಟರು.

ಬೆಂಗಳೂರಿನಿಂದ ಮಂಗಳೂರಿಗೆ ಚಾರ್ಮಾಡಿ ಘಾಟ್ ರಸ್ತೆ ಮೂಲಕ ಎ.13 ರಂದು ಸಂಜೆ ನಳಿನ್ ಕುಮಾರ್ ಕಟೀಲ್ ಮತ್ತು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸಂದರ್ಶನ್ ಮೂಡಬಿದ್ರೆ ಜೊತೆ ಐದು ಪೊಲೀಸ್ ಭದ್ರತಾ ವಾಹನದೊಂದಿಗೆ ಇನೋವಾ ಕಾರಿನಲ್ಲಿ ಬರುತ್ತಿದ್ದಾಗ ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಚುನಾವಣಾಧಿಕಾರಿಗಳು ತಡೆದು ನಿಲ್ಲಿಸಿ ಸಂಪೂರ್ಣವಾಗಿ ಕಾರನ್ನು ಪರಿಶೀಲನೆ ನಡೆಸಿ ನಂತರ ಪ್ರಯಾಣಿಸಲು ಅನುವು ಮಾಡಿಕೊಟ್ಟಿದ್ದಾರೆ‌.

ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಚುನಾವಣಾ ಎಸ್.ಎಸ್.ಟಿ  ಅಧಿಕಾರಿಗಳಾದ ಜಯಕೀರ್ತಿ.ಹೆಚ್.ಬಿ, ಸುಖೇಶ್.ಜಿ , ಧರ್ಮಸ್ಥಳ ಪೊಲೀಸ್ ಸಿಬ್ಬಂದಿ ಮಂಜುನಾಥ್ , ಸುನಿಲ್ ಹಾಗೂ ಸಿ.ಆರ್.ಪಿ.ಎಫ್ ಪಡೆ ಸಿಬ್ಬಂದಿ ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ನಳಿನ್ ಕುಮಾರ್ ಕಟೀಲ್ ಕಾರು ಪರಿಶೀಲನೆ ವೇಳೆ ಇದ್ದರು.

- Advertisement -
spot_img

Latest News

error: Content is protected !!