ನವದೆಹಲಿ : ಉತ್ತರಾಖಂಡ, ಮಣಿಪುರ ಮತ್ತು ಗೋವಾದಲ್ಲಿಯೂ ಬಿಜೆಪಿ ಮುನ್ನಡೆ ಸಾಧಿಸಿದೆ. ದೇಶದ ಐದು ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಚಮಕೌರ್ ಸಾಹಿಬ್ ಮತ್ತು ಭದೌರ್ ಎರಡೂ ವಿಧಾನಸಭಾ ಸ್ಥಾನಗಳಲ್ಲಿ ಹಿಂದುಳಿದಿದ್ದಾರೆ.
ಪಂಜಾಬ್ ಅಸೆಂಬ್ಲಿ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ ಮತ್ತು ಐದು ಬಾರಿ ಮುಖ್ಯಮಂತ್ರಿ ಮತ್ತು ಶಿರೋಮಣಿ ಅಕಾಲಿ ದಳ (ಎಸ್ಎಡಿ) ನಾಯಕ ಪ್ರಕಾಶ್ ಸಿಂಗ್ ಬಾದಲ್ ಅವರು ತಮ್ಮ ಭದ್ರಕೋಟೆಯಾದ ಲಂಬಿ ವಿಧಾನಸಭಾ ಕ್ಷೇತ್ರದಲ್ಲಿ 9000 ಮತಗಳಿಂದ ಹಿಂದುಳಿದಿದ್ದಾರೆ.
ಲಂಬಿ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿ ಗುರ್ಮೀತ್ ಸಿಂಗ್ ಖುದಿಯಾನ್ ಮುನ್ನಡೆ ಸಾಧಿಸಿದ್ದಾರೆ. ಪಂಜಾಬ್ನ 117 ವಿಧಾನಸಭಾ ಸ್ಥಾನಗಳಿಗೆ ಇಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯುತ್ತಿದೆ. ಚಮಕೌರ್ ಸಾಹಿಬ್ ಮತ್ತು ಭದೌರ್ ವಿಧಾನಸಭಾ ಕ್ಷೇತ್ರಗಳಲ್ಲಿ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಹಿನ್ನಡೆಯಲ್ಲಿದ್ದಾರೆ.
ಚಮ್ಕೌರ್ ಸಾಹಿಬ್ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿ ಚರಂಜಿತ್ ಸಿಂಗ್ ಮತ್ತು ಭದೌರ್ ಕ್ಷೇತ್ರದಲ್ಲಿ ಎಎಪಿಯ ಲಾಭ್ ಸಿಂಗ್ ಉಗೋಕೆ ಮುನ್ನಡೆಯಲ್ಲಿದ್ದಾರೆ.