- Advertisement -
- Advertisement -
ಆನೇಕಲ್: ಕಾಡಾನೆಯೊಂದು ಏಕಾಏಕಿ ಬೈಕ್ ಸವಾರನ ಮೇಲೆ ದಾಳಿ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ರಾಗಿಹಳ್ಳಿ ಬಳಿ ನಡೆದಿದೆ.
ಕೋಟಿಗೆರೆ ನಿವಾಸಿಯಾದ ಗಣೇಶ್(28) ಗಾಯಗೊಂಡಿರುವ ವ್ಯಕ್ತಿ. ಶನಿವಾರ ರಾತ್ರಿ 8 ಗಂಟೆಯ ವೇಳೆ ರಾಗಿಹಳ್ಳಿಯ ರಸ್ತೆಯಲ್ಲಿ ಹೋಗುತ್ತಿದ್ದಾಗ ಆನೆ ದಾಳಿ ಮಾಡಿದೆ. ವಿಚಾರ ತಿಳಿದ ಸ್ಥಳೀಯ ನಿವಾಸಿಗಳು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಸಹಾಯ ಮಾಡಿದ್ದಾರೆ.
ಈ ಭಾಗದಲ್ಲಿ ಸಾಮಾನ್ಯವಾಗಿ ಆನೆಗಳು ಆಗಾಗ ದಾಳಿ ಯಾಗುತ್ತಿದ್ದು ಯಾವುದೇ ಕ್ರಮಕೈಗೊಳ್ಳದ ಅರಣ್ಯ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಡಂಚಿನ ಗ್ರಾಮಗಳ ನಿವಾಸಿಗಳ ಮೇಲೆ ಪ್ರತಿನಿತ್ಯ ಕಾಡು ಪ್ರಾಣಿಗಳು ದಾಳಿ ಮಾಡುತ್ತಿವೆ ಇಷ್ಟಾದರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.
- Advertisement -