- Advertisement -
- Advertisement -
ಕೇರಳ: ದೇವಸ್ಥಾನದಲ್ಲಿ ಆನೆಯೊಂದು ಮಾವುತನನ್ನು ತುಳಿದು ಸಾಯಿಸಿದ ಘಟನೆ ಕೇರಳದ ಕೊಟ್ಟಾಯಂ ಜಿಲ್ಲೆಯ ವೈಕೋಂ ತಾಲ್ಲೂಲೂಕಿನ ಟಿವಿ ಪುರಂನಲ್ಲಿರುವ ಶ್ರೀರಾಮ ಸ್ವಾಮಿ ದೇವಸ್ಥಾನದಲ್ಲಿ ನಡೆದಿದೆ. ಅರವಿಂದ್ (26) ಮೃತ ಮಾವುತ. ಆನೆ ಮಾವುತನನ್ನು ತುಳಿದು ಸಾಯಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕುಂಜುಲಕ್ಷ್ಮೀ ಎಂಬ ಹೆಸರಿನ ಆನೆಯನ್ನು ದೇವರ ಉತ್ಸವದ ಅಂಗವಾಗಿ ನೆಟ್ಟಿಪಟ್ಟಿಯನ್ನು ಕಟ್ಟಲಾಗುತ್ತಿತ್ತು. ಈ ವೇಳೆ ನೋಡ ನೋಡುತ್ತಿದ್ದಂತೆ ಮದವೇರಿ ಮೇಲಕ್ಕೆ ಎದ್ದ ಆನೆ ಮಾವುತ ಅರವಿಂದ್ನನ್ನು ಕೆಳಗೆ ಹಾಕಿ ತುಳಿಯಲು ಶುರು ಮಾಡಿದೆ.
ಇದನ್ನು ನೋಡಿದ ಮತ್ತೋರ್ವ ಮಾವುತ ಆನೆಯನ್ನು ಹಿಡಿತಕ್ಕೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗುತ್ತಾನೆ. ಕೂಡಲೇ ಗಾಯಾಳುವನ್ನು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಗಂಭೀರವಾಗಿ ಗಾಯಗೊಂಡಿದ್ದ ಆತ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
- Advertisement -