- Advertisement -
![]()
- Advertisement -
ಕಡಬ: ಕಡಬ ತಾಲೂಕಿನ ಕಡ್ಯ ಕೋಣಾಜೆ ವ್ಯಾಪ್ತಿಯಲ್ಲಿ ಕಾಡಾನೆಯ ಹಿಂಡು ರಾತ್ರಿಯಲ್ಲಿ ಮಾತ್ರವಲ್ಲದೇ ಹಾಡುಹಗಲಲ್ಲೇ ಮನೆಯ ಅಂಗಳ ಮತ್ತು ತೋಟಕ್ಕೆ ನುಗ್ಗಿ ಅಲ್ಲಿನ ಜನರನ್ನು ಭಯಬೀತ ಗೊಳಿಸುತ್ತಿದೆ.

ಸುಬ್ರಹ್ಮಣ್ಯ ವಲಯ ಅರಣ್ಯ ವ್ಯಾಪ್ತಿಯ ಕೋಣಾಜೆ ಗ್ರಾ.ಪಂ ವ್ಯಾಪ್ತಿಯ ಕಡ್ಯ ಪ್ರದೇಶದಲ್ಲಿ ಆನೆ ಹಿಂಡು ತೋಟಕ್ಕೆ ನುಗ್ಗಿ ಅಲ್ಲಿನ ಸುತ್ತಮುತ್ತಲಿನ ಕೃಷಿಯನ್ನು ನಾಶ ಪಡಿಸುತ್ತಿರುವ ದೂರು ಕೇಳಿಬಂದಿದೆ.
ಈ ಘಟನೆಯಿಂದಾಗಿ ಆ ಪ್ರದೇಶದಲ್ಲಿರುವ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕಾಡಾನೆ ಹಿಂಡು ರಾತ್ರಿ, ಹಗಲು ಮನೆ ಹೊರಗೆ ಬರಲು ಭಯಪಡುವಂತಾಗಿದೆ.
ಈ ಬಗ್ಗೆ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ. ಎಂದು ಗ್ರಾಮಸ್ಥರು ತೊಳಲಾಟ ವ್ಯಕ್ತಪಡಿಸಿದ್ದಾರೆ.
- Advertisement -


