- Advertisement -
- Advertisement -
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಕೇಸ್ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಗೆ ಆದೇಶಿಸಿದೆ. ಬರುವ ಸೋಮವಾರ(೧೯) ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ಭಾರತ್ ಜೋಡೋ ಯಾತ್ರೆ ಮತ್ತು ಅಧಿವೇಶನದ ನಡುವೆಯೂ ನನಗೆ ಮತ್ತೆ ಇಡಿ ಸಮನ್ಸ್ ನೀಡಿದ್ದಾರೆ. ನಾನು ಸಹಕರಿಸಲು ಸಿದ್ಧನಿದ್ದೇನೆ. ಆದರೆ ಈ ಸಮಯದಲ್ಲಿ ಸಮನ್ಸ್ ನೀಡಿರುವುದು ರಾಜಕೀಯ ಸಂಚು ಎಂದಿದ್ದಾರೆ. ನನಗೆ ಕಿರುಕುಳ ನೀಡುತ್ತಿದ್ದಾರೆ ಸಾಂವಿಧಾನಿಕ ಮತ್ತು ರಾಜಕೀಯ ಕರ್ತವ್ಯ ನಿರ್ವಹಿಸಲು ಅಡ್ಡಿಯಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಸಮಧಾನ ಹೊರಹಾಕಿದ್ದಾರೆ.
- Advertisement -