- Advertisement -
- Advertisement -
ಕಾಸರಗೋಡು:ರಸ್ತೆ ಅಪಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿ ಬಲಿಯಾಗಿರುವ ಘಟನೆ ರಾಣಿಪುರ ಸಮೀಪದ ಪೆರುತ್ತಡಿ ಎಂಬಲ್ಲಿ ಶನಿವಾರ ನಡೆದಿದೆ. ಘಟನೆಯಲ್ಲಿ ಇತರೆ ಮೂವರು ಗಾಯಗೊಂಡಿದ್ದಾರೆ.
ಸುರತ್ಕಲ್ ಎನ್ ಐ ಟಿ ಕೆ ಯ ವಿದ್ಯಾರ್ಥಿ ರಾಯಚೂರು ನಿವಾಸಿ ಆರಿಬುದ್ದೀನ್ (21) ಮೃತ ದುರ್ದೈವಿ.ಗಾಯಗೊಂಡವರನ್ನು ಪೂಡಂಕಲ್ ನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರಿನಲ್ಲಿ ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪ್ರವಾಸಿ ಕೇಂದ್ರವಾದ ರಾಣಿಪುರಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಚರಂಡಿಗೆ ಬಿದ್ದು ಧರೆಗೆ ಬಡಿದಿದೆ. ರಾಜಾಪುರ ಠಾಣೆ ಪೊಲೀಸರು ಅಪಘಾತಕ್ಕೀಡಾದ ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.
- Advertisement -