Monday, June 30, 2025
Homeತಾಜಾ ಸುದ್ದಿಸಚಿವ ಸ್ಥಾನಕ್ಕೆ ಕೆ.ಎಸ್. ಈಶ್ವರಪ್ಪ ರಾಜೀನಾಮೆ

ಸಚಿವ ಸ್ಥಾನಕ್ಕೆ ಕೆ.ಎಸ್. ಈಶ್ವರಪ್ಪ ರಾಜೀನಾಮೆ

spot_img
- Advertisement -
- Advertisement -

ಬೆಂಗಳೂರು ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಚಿವ ಈಶ್ವರಪ್ಪ ಅವರ ಕುರ್ಚಿಗೆ ಕಂಟಕ ತಂದಿದೆ. ಇತ್ತ ಸಂತೋಷ್ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಂತೆ ವಿಪಕ್ಷಗಳು ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿದ್ದವು. ಪ್ರತಿಭಟನೆಗಳು ಕೂಡ ನಡೆದಿದ್ದವು. ಇದರ ಬೆನ್ನಲೇ ಈಶ್ವರಪ್ಪ ಅವರ ಜೊತೆ ಸಿಎಂ ಬಸವರಾಜ್ ಬೊಮ್ಮಾಯಿ ಕೂಡ ಮಾತುಕತೆ ನಡೆಸಿದ್ದರು. ಹೀಗರುವಾಗಲೇ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಈ ನಡುವೆ ನನ್ನ ಗಂಡನ ಸಾವಿಗೆ ಈಶ್ವರಪ್ಪನೇ ಕಾರಣ ಅಂತ ಸಚಿವ ಈಶ್ವರಪ್ಪನ ಹೆಸರು ಹೇಳಿ ಆತ್ಮಹತ್ಯೆ ಮಾಡಿಕೊಂಡಿರುವ ಮೃತ ಗುತ್ತಿಗೆದಾರ ಸಂತೋಷ್ ಪತ್ನಿ ಜಯಶ್ರೀ ಹೇಳಿದ್ದಾರೆ.

ಈ ಬಗ್ಗೆ ಅವರು ಮಾಧ್ಯಮಗಳ ಜೊತೆಗೆ ಮಾತನಾಡುತ್ತ ತಿಳಿಸಿದ್ದು, ನನ್ನ ಪತಿ ಈಶ್ವರಪ್ಪನವರ ಮೇಲೆ ನಂಬಿಕೆ ಇಟ್ಟು ಕೆಲಸ ಮಾಡುತ್ತಿದ್ದು, ಶೇ.40 ರಷ್ಟು ಲಂಚ ಕೊಟ್ಟರೆ ಮಾತ್ರವೇ ಬಿಲ್ ಪಾಸ್ ಮಾಡುತ್ತೇನೆ ಅಂತ ಹೇಳಿದ್ದರು, ಈ ಬಗ್ಗೆ ಮಾತನಾಡಲು ಅವರ ಬಳಿ ಹೋದ್ರೆ ಅವರು ಇಂದು ನಾಳೇ ಅಂಥ ಆಟವಾಡುತ್ತಿದ್ದರು ಅಂತ ಹೇಳಿದ್ದಾರೆ.

ಇದೇ ವೇಳೇ ಸಂತೋಷ್ ಯಾರು ಎಂಬುದೇ ಗೊತ್ತಿಲ್ಲ ಎಂದಿದ್ದಾರೆ. ಯಾರು ಎಂಬುದೇ ಗೊತ್ತಿಲ್ಲ ಎಂದಾದರೆ ಫೋಟೋದಲ್ಲಿ ಹೇಗೆ ತಾನೆ ಕಾಣಿಸಿಕೊಳ್ಳಲು ಸಾಧ್ಯ ಎಂದು ಪ್ರಶ್ನಿಸಿ ದ್ದಾರೆ.

- Advertisement -
spot_img

Latest News

error: Content is protected !!