- Advertisement -
- Advertisement -
ಕಣ್ಣೂರು: ಕೇರಳದ ಕಣ್ಣೂರು ಸಮೀಪದ ತಳಿಪರಂಬದಲ್ಲಿರು ಶ್ರೀ ರಾಜರಾಜೇಶ್ವರ ದೇವಾಲಯಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
ಕಾರು ಮತ್ತು ಲಾರಿ ಅಪಘಾತ: ಒಂದೇ ಕುಟುಂಬದ ನಾಲ್ವರಿಗೆ ಗಂಭೀರ ಗಾಯ
ಖಾಸಗಿ ಕಾರ್ಯಕ್ರಮದ ನಿಮಿತ್ತ ಕಣ್ಣೂರಿಗೆ ಭೇಟಿ ನೀಡಿದ್ದ ಕುಮಾರಸ್ವಾಮಿ, ಇಂದು ಬೆಳಗ್ಗೆ ದೇಗುಲಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಳದ ಆಡಳಿತ ಮಂಡಳಿಯ ಮುಖ್ಯಸ್ಥರು, ಇತರೇ ಸದಸ್ಯರು ಹಾಗೂ ಅಧಿಕಾರಿಗಳು ಕುಮಾರಸ್ವಾಮಿ ಅವರನ್ನು ಬರಮಾಡಿಕೊಂಡು ದೇವಳದ ಬಗ್ಗೆ ಮಾಹಿತಿ ನೀಡಿದರು.
ಕಾರು ಮತ್ತು ಲಾರಿ ಅಪಘಾತ: ಒಂದೇ ಕುಟುಂಬದ ನಾಲ್ವರಿಗೆ ಗಂಭೀರ ಗಾಯ
ದೇವರ ದರ್ಶನದ ನಂತರ ಕುಮಾರಸ್ವಾಮಿ ದೇವಳಕ್ಕೆ ಪ್ರದಕ್ಷಿಣೆ ಹಾಕಿ ದೇವಾಲಯದ ನಿರ್ಮಾಣ ಶೈಲಿ, ಧಾರ್ಮಿಕ ವಿಧಿ ವಿಧಾನಗಳು ಇತ್ಯಾದಿ ಅಂಶಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಜೆಡಿಎಸ್ ಶಾಸಕ ಬಂಡೆಪ್ಪ ಖಾಷೆಂಪೂರ್ ಕೂಡಾ ಕುಮಾರಸ್ವಾಮಿ ಜೊತೆಗಿದ್ದರು.
- Advertisement -