- Advertisement -
- Advertisement -
ಮಂಗಳೂರು: ಹತ್ಯೆಗೊಳಗಾದ ಬಿಜೆಪಿ ಕಾರ್ಯಕರ್ತರ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಇಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕುಮಾರಸ್ವಾಮಿ ರಸ್ತೆ ಮಾರ್ಗವಾಗಿ ಸುಳ್ಯ ತಾಲೂಕಿನ ನೆಟ್ಟಾರು ಗ್ರಾಮಕ್ಕೆ ತೆರಳಿದ್ದಾರೆ. ಕುಮಾರಸ್ವಾಮಿ ಜೊತೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಮತ್ತು ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ ಕೂಡಾ ಭೇಟಿ ನೀಡಲಿದ್ದಾರೆ.
ನಂತರ ಕಳಂಜ ಗ್ರಾಮದಲ್ಲಿ ಹತ್ಯೆಗೊಳಗಾದ ಮಸೂದ್ ಮತ್ತು ಸುರತ್ಕಲ್ ನಲ್ಲಿ ಹತ್ಯೆಗೊಳಗಾದ ಫಾಝಿಲ್ ನಿವಾಸಕ್ಕೂ ಕುಮಾರಸ್ವಾಮಿ ಭೇಟಿ ನೀಡಲಿದ್ದಾರೆ.
- Advertisement -