- Advertisement -
- Advertisement -
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ.
ಬೆಳಗ್ಗೆ 9.30 ಕ್ಕೆ ಬೆಂಗಳೂರಿನಿಂದ ಹೆಲಿಕಾಫ್ಟರ್ ಮೂಲಕ ಹೊರಡಲಿರುವ ಕುಮಾರಸ್ವಾಮಿ, ಬೆಳಗ್ಗೆ 11 ಗಂಟೆಗೆ ಧರ್ಮಸ್ಥಳಕ್ಕೆ ಬಂದಿಳಿಯಲಿದ್ದಾರೆ.
ನಂತರ ಧರ್ಮಸ್ಥಳ ಮಂಜುನಾಥಸ್ವಾಮಿ ದರ್ಶನ ಪಡೆಯಲಿರುವ ಕುಮಾರಸ್ವಾಮಿ ಬಳಿಕ ದಾಸರಹಳ್ಳಿ ಶಾಸಕ ಆರ್. ಮಂಜುನಾಥ್ ಅವರ ಪುತ್ರನ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ 2 ಗಂಟೆಗೆ ಧರ್ಮಸ್ಥಳ ಹೆಲಿಪ್ಯಾಡ್ ನಿಂದ ಹೆಲಿಕಾಫ್ಟರ್ ಮೂಲಕ ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರಿಗೆ ವಾಪಾಸಾಗಲಿದ್ದಾರೆ.
- Advertisement -