- Advertisement -
- Advertisement -
ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ಯುಪಿಎ ಅಭ್ಯರ್ಥಿಯಾಗಿ ಮಾಜಿ ರಾಜ್ಯಪಾಲೆ ಮಾರ್ಗರೇಟ್ ಆಳ್ವಾ ಆಯ್ಕೆಯಾಗಿದ್ದಾರೆ.
ನವದೆಹಲಿಯಲ್ಲಿ ಇಂದು ಯುಪಿಎ ನಾಯಕರ ಸಭೆ ಬಳಿಕ ಶರದ್ ಪವಾರ್ ಮಾರ್ಗರೇಟ್ ಆಳ್ವಾ ಹೆಸರನ್ನು ಘೋಷಿಸಿದ್ದಾರೆ.
ಕರ್ನಾಟಕದ ಹಿಂದಿನ ಕೆನರಾ ಕ್ಷೇತ್ರದ ಸಂಸದರಾಗಿದ್ದ ಮಾರ್ಗರೇಟ್ ಆಳ್ವಾ ರಾಜಸ್ಥಾನ, ಗೋವಾ, ಗುಜರಾತ್ ಮತ್ತು ಉತ್ತರಾಖಂಡ್ ರಾಜ್ಯಪಾಲೆಯಾಗಿ ಸೇವೆ ಸಲ್ಲಿದ್ದರು.
ಉಪರಾಷ್ಟ್ರಪತಿ ಚುನಾವಣೆ ಆಗಸ್ಟ್ 6 ರಂದು ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಜುಲೈ 19 ರಂದು ಕೊನೆಯ ದಿನವಾಗಿದೆ.
ನಿನ್ನೆ ಎನ್ ಡಿ ಎ ಅಭ್ಯರ್ಥಿಯಾಗಿ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನ್ ಕರ್ ಹೆಸರು ಘೋಷಣೆಯಾಗಿತ್ತು.
- Advertisement -