- Advertisement -
- Advertisement -
ಉಡುಪಿ: ಉಡುಪಿ ಕ್ಷೇತ್ರದ ಮಾಜಿ ಶಾಸಕ ಮತ್ತು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಜೊತೆಗೆ ಕೆಪಿಸಿಸಿ ಉಪಾಧ್ಯಕ್ಷ ಹುದ್ದೆಗೆ ಕೂಡಾ ಪ್ರಮೋದ್ ಮಧ್ವರಾಜ್ ರಾಜೀನಾಮೆ ಸಲ್ಲಿಸಿದ್ದಾರೆ. ಪ್ರಮೋದ್ ಮಧ್ವರಾಜ್ ಸಿದ್ದರಾಮಯ್ಯ ಸರ್ಕಾರದಲ್ಲಿ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಪ್ರಮೋದ್ ಮಧ್ವರಾಜ್ ರಾಜೀನಾಮೆ ಪತ್ರ ರವಾನಿಸಿದ್ದು, ಶೀಘ್ರ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ.
- Advertisement -