- Advertisement -
- Advertisement -
ಪುತ್ತೂರು: ಮೇ.10ರಂದು ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ಹಿನ್ನೆಲೆ ಪುತ್ತೂರಿನಲ್ಲಿ ಕ್ರಿಮಿನಲ್ ಹಿನ್ನೆಲೆ ಉಳ್ಳ ಮೂವರು ಹಿಂದೂ ಕಾರ್ಯಕರ್ತರನ್ನು ಗಡಿಪಾರು ಮಾಡಲಾಗಿದೆ.
ಹಿಂದೂ ಸಂಘಟನೆ ಕಾರ್ಯಕರ್ತರಾಗಿರುವ ಬನ್ನೂರು ಮೂಲದ ಪ್ರಜ್ವಲ್, ಪ್ರತಾಪ್, ಜಗ್ಗ ಯಾನೆ ಅಚ್ಚು, ಅವಿನಾಶ್ ಅವರು ಗಡಿಪಾರು ಮಾಡಲಾಗಿದೆ. ಈ ನಾಲ್ಕು ಮಂದಿ ಚುನಾವಣೆಯ ಸಂದರ್ಭ ಶಾಂತಿ ಕದಡಬಹುದೆಂಬ ನಿಟ್ಟಿನಲ್ಲಿ ನಗರ ಠಾಣೆಯಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಕೆಲವು ದಿನಗಳಿಂದ ಇವರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಬಳಗದಲ್ಲಿ ಗುರುತಿಸಿಕೊಂಡಿದ್ದರು. ಇದೇ ಕಾರಣದಿಂದ ಈ ಗಡಿಪಾರಿಗೆ ಆದೇಶಿಸಲಾಗಿದೆ ಎನ್ನಲಾಗಿದೆ.
- Advertisement -