Saturday, April 27, 2024
Homeಇತರಲಾಕ್ ಡೌನ್ ಪ್ರಯುಕ್ತ ಹೆಚ್ಚುವರಿ ಬಸ್ಸುಗಳ ಕಾರ್ಯಾಚರಣೆ : ಡಿಸಿಎಂ ಸವದಿ ಪ್ರಕಟಣೆ

ಲಾಕ್ ಡೌನ್ ಪ್ರಯುಕ್ತ ಹೆಚ್ಚುವರಿ ಬಸ್ಸುಗಳ ಕಾರ್ಯಾಚರಣೆ : ಡಿಸಿಎಂ ಸವದಿ ಪ್ರಕಟಣೆ

spot_img
- Advertisement -
- Advertisement -

ಬೆಂಗಳೂರು : ಬೆಂಗಳೂರಿನಲ್ಲಿ ಲಾಕ್ ಡೌನ್ ವಿಧಿಸಲಾಗುತ್ತಿರುವುದರಿಂದ ಬೆಂಗಳೂರಿನಿಂದ ಇತರ ಕಡೆಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಇಂದು (ಸೋಮವಾರ) ಮತ್ತು ನಾಳೆ (ಮಂಗಳವಾರ) ಪ್ರತಿದಿನ 800 ಹೆಚ್ಚುವರಿ ಬಸ್ಸುಗಳನ್ನು ಅಂದರೆ ಒಟ್ಟು 1600 ಬಸ್ಸುಗಳನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಕಾರ್ಯಾಚರಣೆಗೊಳಿಸಲಾಗುತ್ತಿದೆ. ಇದಲ್ಲದೇ ಅಗತ್ಯವಿದ್ದರೆ ಮತ್ತಷ್ಟು (200) ಬಸ್ಸುಗಳನ್ನು ಕಾರ್ಯಾಚರಣೆಗೆ ಸಜ್ಜುಗೊಳಿಸಲಾಗಿದೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ ಮಾಹಿತಿ ನೀಡಿದ್ದಾರೆ.

ಈಗಾಗಲೇ ಅಂದರೆ ಇಂದು ಮಧ್ಯಾಹ್ನ 1 ಗಂಟೆಯವರೆಗೆ ಒಟ್ಟು 440 ಬಸ್ಸುಗಳನ್ನು ವಿವಿಧ ಜಿಲ್ಲೆಗಳಿಗೆ ಮತ್ತು ಕೆಲವು ರಾಜ್ಯಗಳಿಗೆ ಬೆಂಗಳೂರಿನಿಂದ ಕಾರ್ಯಾಚರಣೆಗೊಳಿಸಲಾಗಿರುತ್ತದೆ‌. ಒಟ್ಟು 11466 ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಪ್ರಯಾಣಿಕರಿಗೆ ಯಾವುದೇ ರೀತಿಯ ಗೊಂದಲ ಉಂಟಾಗದಂತೆ ಸಕಲ ವ್ಯವಸ್ಥೆಯನ್ನು ಸೂಕ್ತವಾಗಿ ಕೈಗೊಳ್ಳಲಾಗಿದೆ.

ಕೋವಿಡ್-19 ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಜೊತೆಗೆ ಪ್ರಯಾಣಿಕರ ಹಿತದೃಷ್ಟಿಯಿಂದ ಇತರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಲಾಕ್ಡೌನ್ ಘೋಷಣೆಯಿಂದ ಯಾರೂ ಆತಂಕಕ್ಕೆ ಒಳಗಾಗಬಾರದು. ನಮ್ಮ ಸರಕಾರ ಸಾರ್ವಜನಿಕರ ಹಿತ ರಕ್ಷಣೆಗೆ ಕೈಗೊಳ್ಳುತ್ತಿರುವ ಕ್ರಮಗಳಿಗೆ ಸೂಕ್ತ ಸಹಕಾರ ನೀಡಬೇಕೆಂದು ನಾನು ಸರ್ವರಲ್ಲಿಯೂ ಮನವಿ ಮಾಡಿಕೊಳ್ಳುತ್ತೇನೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!