Sunday, June 29, 2025
Homeತಾಜಾ ಸುದ್ದಿಮಂಗಳೂರು: ಕಾಣಿಯೂರು ಹಲ್ಲೆ ಪ್ರಕರಣ: ಎಲ್ಲಾ ಆರೋಪಿಗಳನ್ನು ಬಂಧಿಸದಿರೋದು ಪೊಲೀಸ್ ಇಲಾಖೆಯ ವೈಫಲ್ಯ: ಜೆ.ಆರ್.ಲೋಬೋ‌

ಮಂಗಳೂರು: ಕಾಣಿಯೂರು ಹಲ್ಲೆ ಪ್ರಕರಣ: ಎಲ್ಲಾ ಆರೋಪಿಗಳನ್ನು ಬಂಧಿಸದಿರೋದು ಪೊಲೀಸ್ ಇಲಾಖೆಯ ವೈಫಲ್ಯ: ಜೆ.ಆರ್.ಲೋಬೋ‌

spot_img
- Advertisement -
- Advertisement -

ಮಂಗಳೂರು: ಕಡಬ ತಾಲೂಕಿನ ಕಾಣಿಯೂರಿನಲ್ಲಿ ಇಬ್ಬರು ಯುವಕರ ಮೇಲೆ ನಡೆದ ಮಾರಣಾಂತಿಕ ಹಲ್ಲೆಗೆ ಸಂಬಂಧಿಸಿದಂತೆ, ಎಲ್ಲಾ ಆರೋಪಿಗಳ ಬಂಧಿಸದಿರೋದು ಪೊಲೀಸ್ ಇಲಾಖೆಯ ವೈಫಲ್ಯ. ಎಲ್ಲಾ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಬೇಕು ಎಂದು ಮಾಜಿ ಶಾಸಕ ಜೆ.ಆರ್.ಲೋಬೋ‌ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರಣಾಂತಿಕ ಹಲ್ಲೆಗೊಳಗಾದ ಯುವಕರು ತಪ್ಪು ಮಾಡಿದ್ರೆ ಅದಕ್ಕೆ ಪೊಲೀಸ್‌ ವ್ಯವಸ್ಥೆ ಇದೆ. ಆದ್ರೆ ಈ ರೀತಿ ಹಲ್ಲೆ ಮಾಡಿದ್ದಾರೆ. ಹಾಗಾದ್ರೆ ಪೊಲೀಸ್‌ ವ್ಯವಸ್ಥೆ ಯಾಕೆ ಎಂದು ಪ್ರಶ್ನಿಸಿದ್ರು. ಹಾಗೇ ಕಾಂಗ್ರೆಸ್ ಮಹಿಳಾ ನಾಯಕಿ ಪ್ರತಿಭಾ ಕುಳಾಯಿ ವಿರುದ್ಧ ಅವಾಚ್ಯವಾಗಿ ನಿಂದಿಸಿ ಟ್ರೋಲ್ ಮಾಡಿರುವ ಖಾಸಗಿ ಸುದ್ದಿವಾಹಿನಿ ಸಂಪಾದಕನ ಮೇಲೆ ಈವರೆಗೆ ಯಾವ ಕ್ರಮವನ್ನು ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

- Advertisement -
spot_img

Latest News

error: Content is protected !!