- Advertisement -
- Advertisement -
ಭಾರತದ ಅತ್ಯಂತ ಪ್ರಸಿದ್ಧ ಶಾಸ್ತ್ರೀಯ ಸಂಗೀತಗಾರರಲ್ಲಿ ಒಬ್ಬರಾಗಿರುವ ಜಾಕಿರ್ ಹುಸೇನ್, ಪ್ರಸಿದ್ಧ ತಬಲಾ ವಾದಕ ತಮ್ಮ 73ನೇ ವಯಸ್ಸಿನಲ್ಲಿ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲಿ ನಿಧನರಾಗಿದ್ದಾರೆ.
ಜಾಕೀರ್ ಹುಸೇನ್ ಕಳೆದ ಎರಡು ವಾರಗಳಿಂದ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಇವರನ್ನು ಚಿಕಿತ್ಸೆಗಾಗಿ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕರಿಸದೇ ಭಾನುವಾರದಂದು ಕೊನೆಯುಸಿರೆಳೆದಿದ್ದಾರೆ.
ಜಾಕಿರ್ ಹುಸೇನ್ ಅವರು ತಮ್ಮ ವೃತ್ತಿಜೀವನದಲ್ಲಿ 5 ಗ್ರ್ಯಾಮಿ ಪ್ರಶಸ್ತಿ ಸೇರಿದಂತೆ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದರು.
ಇವರ ಅಗಲಿಕೆಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.
- Advertisement -