- Advertisement -
- Advertisement -
ಪುತ್ತೂರು: ನಿನ್ನೆ ಪುತ್ತೂರಿನಲ್ಲಿ ನಡೆದ ಕೋಟಿ-ಚೆನ್ನಯ ಕಂಬಳಕ್ಕೆ ಬಿಗ್ ಬಾಸ್ ಖ್ಯಾತಿಯ ನಟಿ ಸಾನ್ಯ ಅಯ್ಯರ್ ಬಂದಿದ್ದರು, ಈ ವೇಳೆ ಅವರು ಮುಜುಗರ ಅನುಭವಿಸಿದ ಘಟನೆ ನಡೆದಿದೆ ಎನ್ನಲಾಗಿದೆ.
ಸಾನ್ಯ ಅಯ್ಯರ್, ವೇದಿಕೆಯಿಂದ ಇಳಿದು ಬರುವ ವೇಳೆ ಅಭಿಮಾನಿಯೊಬ್ಬ ಸೆಲ್ಫಿ ಕೇಳುವ ನೆಪದಲ್ಲಿ ಸಾನ್ಯ ಅಯ್ಯರ್ ಕೈ ಹಿಡಿದು ಎಳೆದಿರುವ ಆರೋಪ ಕೇಳಿ ಬಂದಿದೆ. ಇದರಿಂದ ಸಾನಿಯ ಅಯ್ಯರ್ ಮುಜುಗರಕ್ಕೊಳಗಾಗಿದ್ದಾರೆ ಎನ್ನಲಾಗಿದೆ.
ಇದೇ ಅಭಿಮಾನಿ ಸಾನಿಯಾ ಅಯ್ಯರ್ ಭಾಷಣ ಮಾಡುತ್ತಿದ್ದ ಸಮಯದಲ್ಲಿ ಐ ಲವ್ ಯೂ ಹೇಳುತ್ತಿದ್ದ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಯಾವುದೇ ದೂರು ದಾಖಲಾಗಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಋಷೀಕೇಶ್ ಸೊನಾವಣೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.
- Advertisement -