- Advertisement -
- Advertisement -
ಕನ್ಯಾನ : ಒಡಿಯೂರು ಶ್ರೀ ಗುರುದೇವ ಚಾರಿಟೇಬಲ್ ಟ್ರಸ್ಟ್ ಆಡಳಿತಕೊಳಪಟ್ಟ ಕನ್ಯಾನ ಒಡಿಯೂರು ಶ್ರೀ ಗುರುದೇವ ಕೈಗಾರಿಕಾ ಸಂಸ್ಥೆಯ ವಿದ್ಯಾರ್ಥಿಗಳ ಪ್ರವೇಶೋತ್ಸವ ಮತ್ತು ಬೀಳ್ಕೊಡುಗೆ ಸಮಾರಂಭ ಬುಧವಾರದಂದು ಒಡಿಯೂರು ಶ್ರೀ ಗುರುದೇವ ಕಲ್ಯಾಣ ಮಂಟಪದಲ್ಲಿ ಜರಗಿತು.
ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ದೀಪ ಪ್ರಜ್ವಲನೆ ಮಾಡಿ ಆಶೀರ್ವಾಚನ ನೀಡಿದರು. ಸಂಸ್ಥಾನದ ಪರಮಪೂಜ್ಯ ಸಾದ್ವಿ ಶ್ರೀ ಶ್ರೀ ಮಾತಾನಂದಮಯೀ ದಿವ್ಯ ಉಪಸ್ಥಿಯಲ್ಲಿ ಶ್ರೀ ಸೇರಾಜೆ ಸತ್ಯನಾರಾಯಣ ಭಟ್, ಶ್ರೀ ಡಾ|| ಶಂಕರ್ ಭಟ್ ಪ್ರಾಚಾರ್ಯರು ಕನ್ಯಾನ ಪ್ರಥಮ ದರ್ಜೆ ಕಾಲೇಜು,ಒಡಿಯೂರು ಶ್ರೀ ವಿವಿದ್ದೋದ್ದೇಶ ಸೌಹಾರ್ದ ಸಹಕಾರಿಯ ಉಪಾಧ್ಯಕ್ಷರು ಶ್ರೀ ಲಿಂಗಪ್ಪ ಗೌಡ ಪನೆಯಡ್ಕ ನಿರ್ದೇಶಕರಾದ ಗಣಪತಿ ಭಟ್ ಸೇರಾಜೆ ಉಪಸ್ಥಿತರಿದ್ದರು
- Advertisement -