- Advertisement -
- Advertisement -
ಮೂಲ್ಕಿ: ಕಾಂಗ್ರೆಸ್ ಸಮಾವೇಶವು ಇದೇ 17 ಶನಿವಾರದಂದು ಮಂಗಳೂರಿನಲ್ಲಿ ನಡೆಯಲಿದ್ದು ಮೂಲ್ಕಿ-ಮೂಡುಬಿದಿರೆ ಕ್ಷೇತ್ರದಿಂದ 40 ಸಾವಿರ ಮಂದಿ ಭಾಗವಹಿಸಲಿದ್ದಾರೆ ಎಂದು ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಮಿಥುನ್ ರೈ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಅವರು ಸುಮಾರು 55 ಬಸ್ಗಳಲ್ಲಿ ಕಾರ್ಯಕರ್ತರು ಮತ್ತು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಭಾಗವಹಿಸಲಿದ್ದಾರೆ. ಇನ್ನು ಮಂಗಳೂರಿನ ಶಿಕ್ಷಣ ಸಂಸ್ಥೆಯ ಪ್ರಕರಣದಲ್ಲಿ ಶಾಸಕರಾದ ವೇದವ್ಯಾಸ ಕಾಮತ್ ಹಾಗೂ ಡಾ.ಭರತ್ ಶೆಟ್ಟಿ ಅವರು ತೊಡಗಿಕೊಳ್ಳಬಾರದಿತ್ತು. ಇದನ್ನು ಅವರು ರಾಜಕೀಯಕ್ಕೆ ಬಳಸಿಕೊಂಡಿರುವುದು ಬೇಸರದ ವಿಷಯ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಎಚ್.ವಸಂತ, ಮೋಹನ್ ಕೋಟ್ಯಾನ್ ಶಿಮಂತೂರು, ಬಾಲಚಂದ್ರ ಕಾಮತ್, ಧರ್ಮಾನಂದ ಶೆಟ್ಟಿಗಾರ್, ಯೋಗೀಶ್ ಕೋಟ್ಯಾನ್, ಅಬ್ದುಲ್ ಖಾದರ್ ಇದ್ದರು.
- Advertisement -