- Advertisement -
- Advertisement -
ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಲ ಇದರ ಅಧ್ಯಕ್ಷರಾಗಿ ಎರಡನೇ ಬಾರಿಗೆ ಆಯ್ಕೆಯಾದ ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಅಭಿನಂದನೆ ನಡೆಯಿತು. ಮಂಗಳೂರಿನಲ್ಲಿನಡೆದ ಅಭಿನಂದನಾ ಸಮಾರಂಭದಲ್ಲಿ ರಾಜೇಂದ್ರ ಕುಮಾರ್ ದಂಪತಿಗಳನ್ನು ಅಭಿನಂದಿಸಲಾಯಿತು.
ಧರ್ಮಸ್ಥಳದ ಧರ್ಮಾಧಿಕಾರಿ ಮತ್ತು ರಾಜ್ಯಸಭಾ ಸದಸ್ಯ ಡಾ. ವೀರೇಂದ್ರ ಹೆಗ್ಗಡೆ ಶಾಲು ಹೊದಿಸಿ ಹಾರ ತೊಡಿಸಿ ರಾಜೇಂದ್ರ ಕುಮಾರ್ ದಂಪತಿಗಳನ್ನು ಸನ್ಮಾನಿಸಿದರು.
ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಮೂಡಬಿದಿರೆಯ ಆಳ್ವಾಸ್ ಫೌಂಡೇಶನ್ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
- Advertisement -