ಬಂಟ್ವಾಳ: ರಿಕ್ಷಾ ಚಾಲಕರ ಎರಡು ಗುಂಪುಗಳ ನಡುವೆ ಗಲಾಟೆಯಾದ ಘಟನೆ ಬಿಸಿರೋಡಿನ ಕೈಕಂಬದಲ್ಲಿ ನಡೆದಿದೆ.
ಕ್ಯೂ ನಿಲ್ಲುವ ವಿಚಾರದಲ್ಲಿ ರಿಕ್ಷಾ ಚಾಲಕರ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಸ್ಥಳಕ್ಕೆ ಬಂದಿದ್ದ ಸ್ಥಳೀಯ ಪುರಸಭಾ ಸದಸ್ಯನಿಗೆ ಗಾಯವಾಗಿದ್ದು, ಸ್ಥಳದಲ್ಲಿ ಜಮಾಯಿಸಿದ್ದ ಜನರನ್ನು ಚದುರಿಸಲು ಪೋಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.
ಬಿಸಿರೋಡಿನ ಕೈಕಂಬದಲ್ಲಿ ರಿಕ್ಷಾ ಕ್ಯೂ ನ ವಿಚಾರಕ್ಕೆ ಸಂಬಂಧಿಸಿದಂತೆ ರಿಕ್ಷಾ ಯೂನಿಯನ್ ಪ್ರಮುಖನ ಮೇಲೆ ಒಂದು ಗುಂಪು ಹಲ್ಲೆ ನಡೆಸಿದೆ.ಪ್ರತಿಯಾಗಿ ಹಲ್ಲೆಗೊಳಗಾದವನ ಕಡೆಯ ಗುಂಪು ಹಲ್ಲೆ ನಡೆಸಲು ಮುಂದಾದಾಗ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದೆ.
ಗಲಾಟೆಯನ್ನು ನಿಲ್ಲಿಸಲು ಸ್ಥಳೀಯ ಪುರಸಭಾ ಸದಸ್ಯ ಹಸೈನರ್ ಗುಂಪಿನ ಮಧ್ಯೆ ಬಂದಾಗ ಇವರಿಗೂ ಗಾಯವಾಗಿದೆ. ಗಾಯವಾಗಿರುವ ಹಸೈನರ್ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಪ್ರಥಮ ಚಿಕಿತ್ಸೆ ಪಡೆದಿದ್ದಾರೆ.ಘಟನೆ ನಡೆದ ಸ್ಥಳಕ್ಕೆ ಪೋಲೀಸರು ಆಗಮಿಸಿದ್ದು, ಎರಡು ಗುಂಪುಗಳನ್ನು ಚದರಿಸಲು ಲಾಠಿ ಬೀಸಿದ್ದಾರೆ.