Friday, May 17, 2024
Homeಕರಾವಳಿಬಂಟ್ವಾಳ: ಬಸ್ ನಲ್ಲಿ ಕೋಳಿ ಮಾಂಸ ತೆಗೆದುಕೊಂಡು ಹೋದ ವಿಚಾರಕ್ಕೆ ಬಸ್ ಕಂಡೆಕ್ಟರ್ ಹಾಗೂ ಪ್ರಯಾಣಿಕನ...

ಬಂಟ್ವಾಳ: ಬಸ್ ನಲ್ಲಿ ಕೋಳಿ ಮಾಂಸ ತೆಗೆದುಕೊಂಡು ಹೋದ ವಿಚಾರಕ್ಕೆ ಬಸ್ ಕಂಡೆಕ್ಟರ್ ಹಾಗೂ ಪ್ರಯಾಣಿಕನ ಮಧ್ಯೆ ವಾಗ್ವಾದ;  ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ

spot_img
- Advertisement -
- Advertisement -

ಬಂಟ್ವಾಳ: ಬಸ್ ನಲ್ಲಿ ಕೋಳಿ ಮಾಂಸ ತೆಗೆದುಕೊಂಡು ಹೋದ ವಿಚಾರಕ್ಕೆ ಬಸ್ ಕಂಡೆಕ್ಟರ್ ಹಾಗೂ ಪ್ರಯಾಣಿಕನ ಮಧ್ಯೆ ವಾಗ್ವಾದ ನಡೆದು ಕೊನೆಗೆ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ಸುರೇಶ್ ಎಂಬವರು ತುಂಬೆಯಲ್ಲಿ ಸ್ಟೇಟ್ ಬ್ಯಾಂಕ್ ಪುತ್ತೂರು ಕೆ.ಎಸ್.ಆರ್.ಟಿ.ಸಿ.ಬಸ್ ಹತ್ತಿದ್ದಾರೆ. ಕಂಡೆಕ್ಟರ್ ಟಿಕೆಟ್ ಪಡೆಯಲು ಬಂದಾಗ ಸುರೇಶ್ ಕೈಯಲ್ಲಿದ್ದ ಕವರ್ ನೋಡಿ ಏನಿದು ಅಂತಾ ಕೇಳಿದ್ದಾರೆ. ಆಗ ಸುರೇಶ್ ಕೋಳಿ ಮಾಂಸ ಎಂದು ತಿಳಿಸಿದಾಗ ಬಸ್ ನಿಂದ ಇಳಿಯುವಂತೆ ಒತ್ತಾಯಿಸಿದ್ದಾರೆ. ಕೋಳಿ ಮಾಂಸ ಬಸ್ ನಲ್ಲಿ ತರಲು ಅವಕಾಶವಿಲ್ಲ ಎಂದು ಕಂಡೆಕ್ಟರ್ ಮಾದ ಮಾಡಿದರೆ ಕೂಲಿ ಕಾರ್ಮಿಕನಿಗೆ ಇದರ ಅರಿವಿಲ್ಲದೆ , ಬಸ್ ನಿಂದ ಇಳಿಯಲು ಒಪ್ಪಲಿಲ್ಲ. ಇದೇ ಕಂಡೆಕ್ಟರ್ ಸುರೇಶ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ. ಕೊನೆಗೆ ಸುರೇಶ್ ಬಸ್ ನಿಂದ ಇಳಿಯದ  ಹಿನ್ನೆಲೆ  ಚಾಲಕ ಪ್ರಯಾಣಿಕರು ತುಂಬಿದ್ದ ಬಸ್ ನ್ನು ಸೀದಾ ಪೋಲೀಸ್ ಠಾಣೆಗೆ ತಂದು ಸುರೇಶ್ ಅವರನ್ನು ಇಳಿಸಿ ಸೀದಾ ತೆರಳಿದ್ದಾರೆ.

ಇನ್ನು ಈ ವೇಳೆ ಠಾಣೆಯಲ್ಲಿದ್ದ ಎಸ್.ಐ.ರಾಮಕೃಷ್ಣ ಅವರು ಕೆ.ಎಸ್. ಆರ್.ಟಿ.ಸಿ.ಬಸ್ ಚಾಲಕ ಮತ್ತು ನಿರ್ವಾಹಕನಿಗೆ ಬುದ್ದಿ ಮಾತು ಹೇಳಿದ್ದಾರೆ.ಕೂಲಿ ಕಾರ್ಮಿಕರು ಬಸ್ ನಲ್ಲಿ ಮಾಂಸ , ಮೀನು ಕೊಂಡು ಅವಕಾಶ ವಿಲ್ಲ ಎಂದಾದರೆ ಮತ್ತೆ ಹೇಗೆ ಕೊಂಡುಹೋಗುವುದು ಎಂದು ಸುರೇಶ್ ಪ್ರಶ್ನಿಸಿದ್ದಾರೆ.ಕಾರು ,ರಿಕ್ಷಾ ಬಾಡಿಗೆ ಮಾಡಿಕೊಂಡು ಒಂದು ಕೆ.ಜಿ.ಕೋಳಿ ಕೊಂಡು ಹೋಗ್ಬೇಕಾ ಎಂದಿದ್ದಾರೆ.ಬಡವರು ಕೋಳಿ ಮಾಂಸ,ಕೊಂಡು ಹೋದರೆ ಅವರನ್ನು ಪೋಲೀಸ್ ಠಾಣೆಗೆ ಕರೆದುಕೊಂಡು ಹೋಗುವುದು ಎಷ್ಟು ಸರಿ ಎಂಬ ಪ್ರಶ್ನೆ ಸಾರ್ವಜನಿಕರದ್ದು, ನಿರ್ವಾಹಕ ಚಾಲಕರ ಇಂತಹ ನಡೆಯ ಬಗ್ಗೆ ಅಕ್ರೋಶಗಳು ವ್ಯಕ್ತವಾಗಿದೆ.

ಕೊನೆಗೆ ಬಸ್ ನಲ್ಲಿ ಕೋಳಿ,ಮೀನು ಮಾಂಸ ಬಸ್ ನಲ್ಲಿ ತರುವಂತಿಲ್ಲ, ಜೀವ ಇರುವ ವಸ್ತುವನ್ನು ತರಬಹುದು, ಮಾಂಸ ಇತರರಿಗೆ ವಾಸನೆ ಬರುತ್ತದೆ, ಇತರ ಪ್ರಯಾಣಿಕರಿಗೆ ತೊಂದರೆಯಾಗುತ್ತದೆ. ಎಂಬ ನಿಟ್ಟಿನಲ್ಲಿ ನಿಗಮ ಅದೇಶ ಮಾಡಿದೆ ಎಂದು ಕೆ.ಎಸ್. ಆರ್.ಟಿ.ಸಿ.ಬಂಟ್ವಾಳ ವಿಭಾಗದ ವಿಭಾಗೀಯ ಅಧಿಕಾರಿ ಶ್ರೀಶ ಭಟ್ ಅವರು ಮಾಹಿತಿ ನೀಡಿದ್ದಾರೆ.

- Advertisement -
spot_img

Latest News

error: Content is protected !!