Thursday, June 4, 2026
Homeಅಪರಾಧಬೆಳ್ತಂಗಡಿ: ಜೀಪು ಮತ್ತು ಆಟೋ ಚಾಲಕರ ನಡುವೆ ವಾಗ್ವಾದ; ಓರ್ವನ ಮೇಲೆ ಹಲ್ಲೆ

ಬೆಳ್ತಂಗಡಿ: ಜೀಪು ಮತ್ತು ಆಟೋ ಚಾಲಕರ ನಡುವೆ ವಾಗ್ವಾದ; ಓರ್ವನ ಮೇಲೆ ಹಲ್ಲೆ

- Advertisement -
- Advertisement -

ಬೆಳ್ತಂಗಡಿ: ಜೀಪು ಮತ್ತು ಆಟೋ ಚಾಲಕರ ನಡುವೆ ವಾಗ್ವಾದ ನಡೆದು ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಉಜಿರೆಯ ಸೋಮಂತಡ್ಕ ಎಂಬಲ್ಲಿ ನಡೆದಿದೆ.

ಅಮೃತ್ ಅಲ್ಬರ್ಟ್ ಮೋನಿಸ್ (52) ಹಲ್ಲೆಗೊಳಗಾದ ಅಟೋ ಚಾಲಕರು. ಜೀಪು ಚಾಲಕನು
ಆಟೋದಲ್ಲಿ ಕುಳಿತಿದ್ದ ಪ್ರಯಾಣಿಕರನ್ನು ಎಬ್ಬಿಸಿ ಕರೆದುಕೊಂಡು ಹೋಗಿ ಜೀಪಿನಲ್ಲಿ ಕುಳ್ಳಿರಿಸಿದ್ದ ಇದನ್ನು ಪ್ರಶ್ನಿಸಿದ್ದ ಮೋನಿಸ್ ಮೇಲೆ ಜೀಪು ಚಾಲಕ ರಾಡ್ ನಿಂದ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ . ಸದ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!