Monday, May 13, 2024
Homeಕರಾವಳಿಕಡಬ ಬ್ಲಾಕ್‌ನ ಕಾಂಗ್ರೆಸ್‌ನ ಪರಾಮರ್ಶೆ ಸಭೆಯಲ್ಲಿ ಜಿ.ಕೃಷ್ಣಪ್ಪ ಹಾಗೂ ನಂದಕುಮಾರ್ ಬಣದ ನಡುವೆ ಮಾರಾಮಾರಿ

ಕಡಬ ಬ್ಲಾಕ್‌ನ ಕಾಂಗ್ರೆಸ್‌ನ ಪರಾಮರ್ಶೆ ಸಭೆಯಲ್ಲಿ ಜಿ.ಕೃಷ್ಣಪ್ಪ ಹಾಗೂ ನಂದಕುಮಾರ್ ಬಣದ ನಡುವೆ ಮಾರಾಮಾರಿ

spot_img
- Advertisement -
- Advertisement -

ಕಡಬ ಬ್ಲಾಕ್‌ನ ನಡೆದ ಕಾಂಗ್ರೆಸ್‌ನ ಪರಾಮರ್ಶೆ ಸಭೆಯಲ್ಲಿ ಜಿ.ಕೃಷ್ಣಪ್ಪ ಹಾಗೂ ನಂದಕುಮಾರ್ ಬಣದ ನಡುವೆ ಮಾರಾಮಾರಿ ನಡೆದ ಘಟನೆ ಕಡಬ ಅಂಬೇಡ್ಕರ್ ಭವನದಲ್ಲಿ ನಡೆದಿದೆ.

ಸಭೆಯಲ್ಲಿ ಸ್ವತಃ ಕೃಷ್ಣಪ್ಪ ಅವರೇ ಉಚ್ವಾಟಿತ ನಾಯಕರಲ್ಲಿ, ನೀವು ಈ ಸಭೆಗೆ ಯಾಕೆ ಬಂದಿದ್ದೀರಿ?, ನಿಮಗೆ ಮಾನ ಮರ್ಯಾದೆ ಇಲ್ಲವೇ ಎಂದು ಪ್ರಶ್ನಿಸಿದರೆನ್ನಲಾಗಿದೆ. ಕೃಷ್ಣಪ್ಪ ಬೆಂಬಲಿಗರಾದ ಇತರ ನಾಯಕರು ಕೂಡ ಇದನ್ನು ಪ್ರಶ್ನಿಸಿ ಇಂದಿನ ಈ ಸಭೆಯಲ್ಲಿ ಪಕ್ಷದಿಂದ ಉಚ್ವಾಟಿತರು ಇರಲು ಅವಕಾಶ ಇದೆಯೇ ಎಂದು ಕೇಳಿದರೆನ್ನಲಾಗಿದೆ. ಆಗ ಉಭಯ ತಂಡಗಳ ನಡುವೆ ಮಾತಿನ ಚಕಮಕಿ, ನೂಕಾಟ, ತಳ್ಳಾಟ, ಹಲ್ಲೆ ನಡೆಯುವ ತನಕ ತಲುಪಿದ್ದು, ಮಾಹಿತಿ ಪಡೆದ ಪೋಲಿಸರ ಮಧ್ಯಪ್ರವೇಶಿಸಿದ್ದಾರೆ.

ಅಲ್ಲದೇ ಕೃಷ್ಣಪ್ಪ ಬಣದ ಕೆಲವು ಮಂದಿ ಮುಖಂಡರು ನಂದಕುಮಾರ್ ಬಣದ ಮಹಿಳಾ ಮುಖಂಡರೋರ್ವರು ಸೇರಿದಂತೆ ನಾಲ್ಕು ಮಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಬಳಿಕ ಪೋಲಿಸರು ಆಗಮಿಸಿ ಇತ್ತಂಡಗಳಿಗೆ ಪ್ರತ್ಯೇಕ ಸಭೆ ನಡೆಸುವಂತೆ ಸೂಚಿಸಿದರೆನ್ನಲಾಗಿದೆ.

- Advertisement -
spot_img

Latest News

error: Content is protected !!