Monday, May 20, 2024
Homeಅಪರಾಧಮಂಗಳೂರು : ಸಾರ್ವಜನಿಕ ಸ್ಥಳದಲ್ಲಿ ಎರಡು ತಂಡದ ನಡುವೆ ಹೊಡೆದಾಟ ;ಬರ್ಕೆ ಪೊಲೀಸರ ಮೇಲೆ ಹಲ್ಲೆ,...

ಮಂಗಳೂರು : ಸಾರ್ವಜನಿಕ ಸ್ಥಳದಲ್ಲಿ ಎರಡು ತಂಡದ ನಡುವೆ ಹೊಡೆದಾಟ ;ಬರ್ಕೆ ಪೊಲೀಸರ ಮೇಲೆ ಹಲ್ಲೆ, 7ಮಂದಿ ಬಂಧನ

spot_img
- Advertisement -
- Advertisement -

ಮಂಗಳೂರು : ನಗರದ ಬಳ್ಳಾಲ್‌ಬಾಗ್‌ನ ಸಾಯಿ ನೆಸ್ಟ್ ಸರ್ವಿಸ್ ಅಪಾರ್ಟ್‌ಮೆಂಟ್ ಎದುರು ಸಾರ್ವಜನಿಕ ಸ್ಥಳದಲ್ಲಿ ಕಳೆದ ಮಧ್ಯರಾತ್ರಿ ಯುವಕರ ಎರಡು ತಂಡಗಳ ನಡುವೆ ಹೊಡೆದಾಟ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಬರ್ಕೆ ಠಾಣೆ ಪೊಲೀಸರು 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಳ್ಳಾಲ್ ಬಾಗ್ ಫ್ರೆಂಡ್ಸ್ ಮತ್ತು ಬಿರುವೆರ್ ಕುಡ್ಲ ಸಂಘಟನೆಗಳ ಕಾರ್ಯಕರ್ತರು ಮಧ್ಯೆ ಹೊಡೆದಾಟ ನಡೆಡಿದ್ದು, ಬಂಧಿತ ಆರೋಪಿಗಳನ್ನು ಧೀರಜ್ ಶೆಟ್ಟಿ, ರಕ್ಷಿತ್ ಕೆ., ರೋಹಿತ್ ಶೆಟ್ಟಿ, ಹರ್ಷಿತ್, ಕೀರ್ತಿರಾಜ್, ವಿವೇಕ್, ರಾಹುಲ್ ಎಂದು ಗುರುತಿಸಲಾಗಿದೆ.

ಸುಮಾರು 15ರಿಂದ 20 ಜನರ ಯುವಕರ ತಂಡ ಪರಸ್ಪರ ಒಬ್ಬರನ್ನೊಬ್ಬರು ಎಳೆದಾಡಿಕೊಂಡು ಮರದ ವಿಕೆಟ್, ಪೈಪ್ ಕಲ್ಲುಗಳನ್ನು ಹಿಡಿದು ಹಲ್ಲೆ ನಡೆಸಿದ್ದು, ಅಲ್ಲಿದ್ದ ವಾಹನಗಳನ್ನೂ ಜಖಂಗೊಳಿಸಿದ್ದಾರೆ. ಘಟನೆಯಲ್ಲಿ ಒಂದು ಕಾರು, ಆರು ದ್ವಿಚಕ್ರ ವಾಹನಗಳು ಜಖಂಗೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿನ್ನೆ ರಾತ್ರಿ ಬರ್ಕೆ ಠಾಣಾ ಪೊಲೀಸ್ ಉಪನಿರೀಕ್ಷಕಿ ಶೋಭಾ ರಾತ್ರಿ ರೌಂಡ್ಸ್ ನಡೆಸುತ್ತಿದ್ದ ವೇಳೆ ಘಟನೆ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ್ದರು. ಆ ಸಂದರ್ಭ ಎರಡು ತಂಡಗಳ ಹೊಡೆದಾಟ ನಡೆಯತ್ತಿದ್ದು, ಗಲಾಟೆ ಬಿಡಿಸಲು ಪ್ರಯತ್ನಿಸಿದ್ದಾರೆ. ಗುಂಪಿನಲ್ಲಿದ್ದ ಕೆಲವು ಸ್ಥಳೀಯ ಯುವಕರ ಪರಿಚಯವಿದ್ದ ಮಹಿಳಾ ಪೊಲೀಸ್ ಅಧಿಕಾರಿ ಗುಂಪಿನಲ್ಲಿದ್ದವರನ್ನು ಸಮಾಧಾನ ಪಡಿಸಲು ಯತ್ನಿಸಿದ್ದಾರೆ. ಆದರೆ ಧೀರಜ್ ಎಂಬಾತ ಬರ್ಕೆ ಮಹಿಳಾ ಎಸ್ಐ ಶೋಭಾ ಮೇಲೆ ಕೈಮಾಡಿದ್ದು ಅವರ ಕೈಯಲ್ಲಿದ್ದ ವಾಕಿ ಟಾಕಿಯನ್ನು ನೆಲಕ್ಕೆ ಬಿಸಾಡಿದ್ದಾರೆ. ಇತರ ಪೊಲೀಸರ ಮೇಲೂ ಕೈಮಾಡಿದ್ದಾರೆ. ಎರಡು ತಂಡಗಳ ವೈಯಕ್ತಿಕ ದ್ವೇಷದಲ್ಲಿ ಪೊಲೀಸರ ಮೇಲೆ ಕೈಮಾಡಿದ್ದು ಆನಂತರ ಹೆಚ್ಚಿನ ಪೊಲೀಸರು ಬಂದು ಆರು ಮಂದಿಯನ್ನು ಸ್ಥಳದಿಂದ ವಶಕ್ಕೆ ಪಡೆದಿದ್ದಾರೆ. 

ಈ ಸಂದರ್ಭ ಸ್ಥಳಕ್ಕೆ ಪಿಎಸ್ಸೈ ಹಾರೂನ್ ಅಖ್ತರ್ ಹಾಗೂ ಇತರ ಸಿಬ್ಬಂದಿ ಆಗಮಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಈ ಸಂದರ್ಭ ಅಲ್ಲಿದ್ದ ಕೆಲ ಯುವಕರು ಸ್ಥಳದಿಂದ ಪರಾರಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ

- Advertisement -
spot_img

Latest News

error: Content is protected !!