Thursday, May 2, 2024
Homeಕರಾವಳಿಮಂಗಳೂರು ; ಯುವಕರ ತಂಡದ ಮಧ್ಯೆ ಹೊಡೆದಾಟ ; ನಾಲ್ಕು ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

ಮಂಗಳೂರು ; ಯುವಕರ ತಂಡದ ಮಧ್ಯೆ ಹೊಡೆದಾಟ ; ನಾಲ್ಕು ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

spot_img
- Advertisement -
- Advertisement -

ಮಂಗಳೂರು ;  ಯುವಕರ ತಂಡವೊಂದರ ಮಧ್ಯೆ ನಡೆದ ಹೊಡೆದಾಟ ಪ್ರಕರಣಕ್ಕೆ ಸಂಬಂಧಿಸಿದಂತೆ  4 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೊಹಮ್ಮದ್ ಶರೀಫ್, ಅಬ್ದುಲ್ ರಹಿಮಾನ್, ಚೇತನ್ ಹಾಗೂ ವಿಕ್ರಮ್ ಬಂಧಿತರು.

 ಆರೋಪಿಗಳು ಆಗಸ್ಟ್  30ರಂದು ಬೆಳಗ್ಗೆ 11.15ಕ್ಕೆ ನೀರುಮಾರ್ಗ ಅಂಚೆ ಕಚೇರಿಯ ಬಳಿಯ ಸಾರ್ವಜನಿಕ ರಸ್ತೆ ಬದಿಯಲ್ಲಿ ಪರಸ್ಪರ ಹೊಡೆದಾಡಿಕೊಂಡು ಸಾರ್ವಜನಿಕರ ಶಾಂತಿ ಭಂಗ ತಂದಿದ್ದರು. ಈ ಬಗ್ಗೆ ಮಾಹಿತಿ ಪಡೆದ ಮಂಗಳೂರು ಗ್ರಾಮಾಂತರ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -
spot_img

Latest News

error: Content is protected !!