Thursday, June 4, 2026
Homeಕರಾವಳಿಉಡುಪಿಕುಂದಾಪುರ: ದೇವಸ್ಥಾನದಲ್ಲಿ ಮತಯಾಚಿಸಿ ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ ಅಭ್ಯರ್ಥಿ ಗುರುರಾಜ್‌ ಗಂಟಿಹೊಳೆ ವಿರುದ್ಧ ಪ್ರಕರಣ...

ಕುಂದಾಪುರ: ದೇವಸ್ಥಾನದಲ್ಲಿ ಮತಯಾಚಿಸಿ ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ ಅಭ್ಯರ್ಥಿ ಗುರುರಾಜ್‌ ಗಂಟಿಹೊಳೆ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಕುಂದಾಪುರ: ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ್‌ ಗಂಟಿಹೊಳೆ ದೇವಸ್ಥಾನದಲ್ಲಿ ಮತಯಾಚಿಸುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದು, ಈ ಹಿನ್ನೆಲೆಯಲ್ಲಿ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಂದೂರು ವಿಧಾನಸಭಾ ಕ್ಷೇತ್ರದ ಸಬ್ಲಾಡಿಯ ಶ್ರೀಮಾರಿಕಾಂಬಾ ಮತ್ತು ನಂದಿಕೇಶ್ವರ ಹಾಗೂ ಸಪರಿವಾರ ದೇವಸ್ಥಾನದಲ್ಲಿ ಬಿಜೆಪಿ ಅಭ್ಯರ್ಥಿ ಚುನಾವಣಾ ಪ್ರಚಾರ ಮಾಡಿದ್ದಾರೆ. ಈ ಸಂಬಂಧ ಗುರುರಾಜ್‌ ಗಂಟಿಹೊಳೆ ವಿರುದ್ಧ ಬೈಂದೂರು ಬ್ಲಾಕ್‌ ಕಾಂಗ್ರೆಸ್‌ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಮಣಿಕಂಠ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.

- Advertisement -

Latest News

error: Content is protected !!