- Advertisement -
- Advertisement -
ಉಡುಪಿ: ದೈವಾರಾಧನೆ ಬಗ್ಗೆ ದೈವ ನರ್ತಕರ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟ ಮಾಜಿ ಸಚಿವೆ ಬಿ.ಟಿ ಲಲಿತಾ ನಾಯಕ್ ವಿರುದ್ಧ ಹಿಂದೂ ಜಾಗರಣ ವೇದಿಕೆ ಉಡುಪಿ ಠಾಣೆಯಲ್ಲಿ ದೂರು ದಾಖಲಿಸಿದೆ.
ದೈವ ನರ್ತಕರಿಗೆ ಮಾಸಾಶನ ನೀಡಬಾರದಿತ್ತು. ಭೂತಾರಾಧನೆ ಮೂಢನಂಬಿಕೆ ಎಂದು ಹೇಳಿದ್ದ ಮಾಜಿ ಸಚಿವೆ ತುಳುನಾಡ ಜನರ ಭಾವನೆಗೆ ಧಕ್ಕೆಯುಂಟುಮಾಡಿದ್ದಾರೆ. ಅವರ ಹೇಳಿಕೆಯಿಂದ ಧಾರ್ಮಿಕ ನಂಬಿಕೆ ಮತ್ತು ಭಾವನೆಗೆ ಘಾಸಿಯಾಗಿದೆ. ಅವರಿಗೆ 3 ವರ್ಷ ಶಿಕ್ಷೆ, ದಂಡ ವಿಧಿಸಬೇಕು. ಭಾರತೀಯ ದಂಡಸಂಹಿತೆ ಪ್ರಕಾರ ಧಾರ್ಮಿಕ ಭಾವನೆಗೆ ಧಕ್ಕೆ ನಿಯಮದಡಿ (295 ಎ) ಪ್ರಕರಣ ದಾಖಲಿಸುವಂತೆ ಆಗ್ರಹಿಸಿದ್ದಾರೆ.
- Advertisement -