- Advertisement -


- Advertisement -
ಬೆಂಗಳೂರು: ಕೇಂದ್ರ ಸಚಿವ ವಿ.ಸೋಮಣ್ಣ ಪುತ್ರ ಅರುಣ್ ಸೋಮಣ್ಣ ವಿರುದ್ಧ ದೂರು ದಾಖಲಾಗಿದೆ. ಅರುಣ್ ಸೋಮಣ್ಣ ವಿರುದ್ಧ ವಂಚನೆ, ಜೀವ ಬೆದರಿಕೆ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕೇಂದ್ರ ಸಚಿವ ವಿ.ಸೋಮಣ್ಣ ಅವರ ಪುತ್ರ ಅರುಣ್ ಸೋಮಣ್ಣ ವಿರುದ್ಧ ದಂಪತಿ ಸಂಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಪೊಲೀಸರಿಗೆ ನೀಡಿರುವ ದೂರಿನಲ್ಲಿ ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ಅವ್ಯವಹಾರದಲ್ಲಿ ತಮಗೆ ಬೆದರಿಕೆ ಹಾಕಿದ ವಂಚಿಸಿದ್ದಾರೆ ಎಂದು ದೂರಿದ್ದಾರೆ.
ಹೀಗಾಗಿ ಕೇಂದ್ರ ಸಚಿವ ವಿ.ಸೋಮಣ್ಣ ಅವರ ಪುತ್ರ ಅರುಣ್, ಜೀವನ್ ಕುಮಾರ್ ಹಾಗೂ ಪ್ರಮೋದ್ ಎಂಬುವರ ವಿರುದ್ಧ ಸಂಜಯ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
- Advertisement -


