- Advertisement -
- Advertisement -
ಬೆಂಗಳೂರು: ಭೃಷ್ಟಾಚಾರದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮತ್ತೂಂದು ಖಾಸಗಿ ದೂರು ದಾಖಲಾಗಿದೆ.
ಸೋಮವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಖಾಸಗಿ ದೂರು ದಾಖಲಿಸಿದ್ದಾರೆ.
ಈಗಾಗಲೇ ರಾಜ್ಯಪಾಲರಿಗೆ ಮುಡಾ ಹಗರಣ ಸಂಬಂಧ ದೂರು ನೀಡಿ ಅಭಿಯೋಜನೆಗೆ ಕೋರಲಾಗಿದೆ.
ಈ ಮಧ್ಯೆ ಸಿಎಂ ವಿಚಾರಣೆಗೆ ಅಂಗೀಕರಿಸಬೇಕು ಎಂದು ಅಬ್ರಹಾಂ ಅವರು ಮನವಿ ಮಾಡಿದ್ದಾರೆ. ಈ ಕುರಿತಂತೆ ವಿಚಾರಣೆ ಮಂಗಳವಾರ ಮಧ್ಯಾಹ್ನ ನಡೆಯಲಿದೆ ಎಂದು ತಿಳಿದು ಬಂದಿದೆ.
- Advertisement -