- Advertisement -
- Advertisement -
ಬೆಂಗಳೂರು : ನಗರ ಪ್ರದೇಶದಲ್ಲಿ ಮಾಸ್ಕ್ ಧರಿಸದೇ ಓಡಾಡುತ್ತಿದ್ದರೆ ಅಂತಹವರು 1000 ರೂಪಾಯಿ ದಂಡ ವಿಧಿಸುವುದಾಗಿ ಹೊಸ ನಿಯಮ ಜಾರಿಗ ತಂದಿತ್ತು. ಇದಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಸರ್ಕಾರ ದಂಡದ ಮೊತ್ತವನ್ನು ಇಳಿಕೆ ಮಾಡಿದೆ.
ನಗರದಲ್ಲಿ 1000 ರೂ. ದಂಡದ ಬದಲು 250 ರೂ.ಗೆ, ಗ್ರಾಮೀಣ ಪ್ರದೇಶದಲ್ಲಿ 500 ರೂ. ಬದಲು 100 ರೂಪಾಯಿ ದಂಡದ ಪ್ರಮಾಣ ನಿಗದಿ ಮಾಡಿ ಇಂದು ಮಧ್ಯಾಹ್ನ ಸಿಎಂ ಯಡಿಯೂರಪ್ಪ ಆದೇಶಿಸಿದ್ದಾರೆ.ಇದು ಸಾರ್ವಜನಿಕರಿಗೆ ಕೊಂಚ ಸಮಾಧಾನ ತರಿಸಿದೆ.
- Advertisement -