Tuesday, May 7, 2024
Homeಇತರಉಪ್ಪಿನಂಗಡಿ: ದೈವ ದೇವರಿಗೆ ಹರಕೆ ಹೊತ್ತು ಹೊರ ಬರುವಷ್ಟರಲ್ಲಿ ಕಳೆದು ಕೊಂಡ ಚಿನ್ನದ ಸರ ಪತ್ತೆ

ಉಪ್ಪಿನಂಗಡಿ: ದೈವ ದೇವರಿಗೆ ಹರಕೆ ಹೊತ್ತು ಹೊರ ಬರುವಷ್ಟರಲ್ಲಿ ಕಳೆದು ಕೊಂಡ ಚಿನ್ನದ ಸರ ಪತ್ತೆ

spot_img
- Advertisement -
- Advertisement -

ಉಪ್ಪಿನಂಗಡಿ: ಮಹಿಳೆಯೊಬ್ಬರು ತನ್ನ ಮಗಳ ಮನೆಗೆ ಹೋಗುತ್ತಿರುವ ದಾರಿಯಲ್ಲಿ ಕಳೆದುಕೊಂಡಿದ್ದ 24 ಗ್ರಾಂನ ಚಿನ್ನದ ಸರವೊಂದು ದೈವ ದೇವರಿಗೆ ಹರಕೆ ಹೊತ್ತ ಕೂಡಲೇ ಲಭಿಸಿದ ಸ್ವಾರಸ್ಯಕರ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿಯ ಇಂದಿರಾ ದೇವಾಡಿಗ ಸುಳ್ಯಪದವಿನಲ್ಲಿರುವ ಮಗಳ ಮನೆಗೆ ಹೋಗುವಾಗ ಸರವನ್ನು ಕಳೆದುಕೊಂಡಿದ್ದರು.

ಸುಳ್ಯ ಪದವಿಗೆ ತಲುಪಿದಾಗ ಈ ವಿಚಾರ ಅರಿವಿಗೆ ಬಂದಿದ್ದು, ರಿಕ್ಷಾ ಚಾಲಕ ರಮೇಶ್‌ ಅವರಿಗೆ ವಿಷಯ ತಿಳಿಸಿ ಮೊಬೈಲ್‌ ಸಂಖ್ಯೆ ನೀಡಿ ಮಗಳ ಮನೆಗೆ ಹೋದರು. ದಾರಿಯಲ್ಲೆಲ್ಲೋ ಬಿದ್ದಿರುವ ಹಿನ್ನೆಲೆಯಲ್ಲಿ ಹುಡುಕುವ ಪ್ರಯತ್ನ ಅಸಾಧ್ಯವೆಂದುಕೊಂಡು ವಾಪಸ್‌ ಉಪ್ಪಿನಂಗಡಿಗೆ ಬಂದ ಅವರು ಮಹಾಕಾಳಿ ದೇವರಿಗೆ ಹಾಗೂ ಕೊರಗಜ್ಜನಿಗೆ ಹರಕೆ ಸಂಕಲ್ಪಿಸಿ ಚಿನ್ನದ ಸರ ದೊರಕಿಸುವಂತೆ ಪ್ರಾರ್ಥಿಸಿದರು.

ವಿಸ್ಮಯವೆಂಬಂತೆ ದೇವಸ್ಥಾನದಿಂದ ಹೊರಬರುತ್ತಿದ್ದಂತೆಯೇ ಪುತ್ತೂರಿನಿಂದ ಬಂದ ಫೋನ್‌ ಕರೆ
ಯೊಂದು ಕಳೆದುಹೋದ ಚಿನ್ನಾಭರಣ ಪುತ್ತೂರಿನಲ್ಲಿ ಸುರಕ್ಷಿತವಾಗಿರುವುದನ್ನು ಖಚಿತಪಡಿಸಿದ್ದಾರೆ

- Advertisement -
spot_img

Latest News

error: Content is protected !!