ಮಂಗಳೂರು; ಹಲವು ಪ್ರಶಸ್ತಿ ವಿಜೇತ ಪ್ರಾಧ್ಯಾಪಕನ ವಿರುದ್ಧ ಎಫ್ ಐಆರ್ ದಾಖಲಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಡಾ.ಅರುಣ್ ಉಳ್ಳಾಲ್ ಎಂಬ ಪ್ರಾಧ್ಯಾಪಕರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಮಂಗಳೂರಿನ ಉಳ್ಳಾಲ ತಾಲೂಕಿನ ಕಿನ್ಯಾದ ಕೇಶವ ಶಿಶುಮಂದಿರದಲ್ಲಿ ನಡೆದ ನವದಂಪತಿ ಸಮಾವೇಶದಲ್ಲಿ ಭಾಷಣ ಮಾಡಿದ್ದ ಡಾ.ಅರುಣ್ ಉಳ್ಳಾಲ್, ಬೇರೆ ಧರ್ಮಕ್ಕೆ ದಕ್ಕೆ ಉಂಟಾಗುವ ರೀತಿಯಲ್ಲಿ ಮಾತನಾಡಿದ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ಸೆನ್ ಪೊಲೀಸರು ಪ್ರಾಧ್ಯಾಪಕ ಡಾ.ಅರುಣ್ ಉಳ್ಳಾಲ್ ವಿರುದ್ದ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.
ನವದಂಪತಿ ಸಮಾವೇಶದಲ್ಲಿ ಭಾಷಣ ಮಾಡುತ್ತಾ ಹಿಂದುಗಳು ಹಿಂದು ಮಾಲೀಕತ್ವದ ಸಭಾಂಗಣದಲ್ಲೇ ಮದುವೆ ಆಗಬೇಕು. ಹಿಂದು ಮಾಲೀಕತ್ವದ ಶಿಕ್ಷಣ ಸಂಸ್ಥೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಬೇಕು. ಅನ್ಯ ಧರ್ಮೀಯರ ಸಭಾಂಗಣದಲ್ಲಿ ಮದುವೆ ಆಗಬಾರದು. ಅವರ ಶಾಲೆಗಳಿಗೆ ಕಳುಹಿಸಬಾರದು, ಅವರಿಗೆ ನಿಮ್ಮಿಂದ ಸಲ್ಲುವ ಆದಾಯದ ಒಂದು ಪಾಲು ವಿದೇಶಕ್ಕೆ ಸಲ್ಲುತ್ತದೆ ಎಂದು ಅರುಣ್ ಉಳ್ಳಾಲ್ ಅವರು ಹೇಳಿದ್ದರು.
ಇವರ ಈ ಒಂದು ಹೇಳಿಕೆಗೆ ಅನ್ಯ ಧರ್ಮೀಯ ಸಂಘಟನೆಗಳಿಂದ ವಿರೋಧದ ಬೆನ್ನಲ್ಲೇ ಧರ್ಮ ದ್ವೇಷದ ಭಾಷಣ ಮಾಡಿದ ಅರೋಪದಡಿ ಡಾ. ಅರುಣ್ ಉಳ್ಳಾಲ್ ವಿರುದ್ದ ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ 66(C) IT ACT AND 196, 351 (BNS), 2023 ರಂತೆ ಪ್ರಕರಣ ದಾಖಲಾಗಿದೆ.