- Advertisement -
- Advertisement -
ಬೆಳ್ತಂಗಡಿ: ಮುಸ್ಲಿಂ ಸಮುದಾಯದ ಭವನಗೆ ಧಕ್ಕೆಯಾಗುವ ರೀತಿಯಲ್ಲಿ ಸಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಆರೋಪದಲ್ಲಿ ತಾಲೂಕಿನ ಬಾರ್ಯ ಪುತ್ತಿಲ ಗ್ರಾಮದ ರಘುರಾಮು ಶೆಟ್ಟಿ ವಿರುದ್ಧ ಕೇಸು ದಾಖಲಾಗಿದೆ.
ಘಟನೆಯ ವಿವರ:
ಬಾರ್ಯ ಪುತ್ತಿಲ ಗ್ರಾಮದ ರಘುರಾಮು ಶೆಟ್ಟಿ ಎಂಬ ವ್ಯಕ್ತಿ ಅಗಸ್ಟ್ 5 ರ ರಾಮಮಂದಿರ ಭೂಮಿ ಪೂಜೆಯಂದು ನೀತಿ ಸಂಹಿತೆ ಉಲ್ಲಂಘಿಸಿ ಪಟಾಕಿ ಸಿಡಿಸಿದ ವಿಚಾರಕ್ಕೆ ಪಂಜಾಲಕಟ್ಟೆ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.
ಆ ಬಳಿಕ ಸಮಾಜಿಕ ಜಾಲದಲ್ಲಿ ತನ್ನನ್ನು ಯಾರಿಗೂ ಏನು ಮಾಡಲು ಸಾದ್ಯವಿಲ್ಲ ಹಾಗೂ ಮುಸ್ಲಿಂ ಸಮುದಾಯವನ್ನು ಬಾಂಬ್ ಹಾಕಿ ನಾಶ ಮಾಡಬೇಕು ಎಂದು ವಾಟ್ಸಾಪ್ ನಲ್ಲಿ ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ.
ಈ ಕುರಿತು ಕರ್ಪಾಡಿ ನಿವಾಸಿ ಜಲೀಲ್ ಪುಂಜಾಲಕಟ್ಟೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

- Advertisement -