ಬೆಂಗಳೂರು: ಕಿರುತೆರೆ ನಟ ವರುಣ್ ಆರಾಧ್ಯ ವಿರುದ್ಧ ಯುವತಿಯೊಬ್ಬಳು ದೂರು ನೀಡಿದ್ದಾಳೆ. ಕೆಲ ತಿಂಗಳಿಂದ ವರುಣ್ ನನ್ನ ಖಾಸಗಿ ಪೋಟೋಗಳನ್ನು ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದಾನೆ ಎಂದು ದೂರು ಕೊಟ್ಟಿದ್ದಾಳೆ.ಬೆಂಗಳೂರಿನ ಪಶ್ಚಿಮ ವಿಭಾಗದ ಸೆನ್ ಠಾಣೆಯಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳು ದೂರು ಕೊಟ್ಟಿದ್ದಾಳೆ.
ತನಗೆ ಕಿರುತೆರೆ ನಟ ವರುಣ್ ಆರಾಧ್ಯ ಇನ್ಸ್ ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದ. ಪರಿಚಯ ಸ್ನೇಹಕ್ಕೆ ತಿರುಗಿ, ಆ ಬಳಿಕ ತಾವಿಬ್ಬರೂ ಪ್ರೀತಿಸುತ್ತಿದ್ದೆವು .ಕೆಲ ತಿಂಗಳ ಹಿಂದಿನಿಂದ ತಾನು, ಅರುಣ್ ಆರಾಧ್ಯ ದೂರವಾಗಿದ್ದೆವು. ಈ ಬಳಿಕ ವರುಣ್ ಆರಾಧ್ಯ ತನ್ನ ಖಾಸಗಿ ಕ್ಷಣದ ಪೋಟೋಗಳನ್ನು ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದಾನೆ. ಆತನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಯುವತಿ ದೂರಿನಲ್ಲಿ ಮನವಿ ಮಾಡಿದ್ದಾರೆ.ಯುವತಿಯ ದೂರಿನ ಹಿನ್ನಲೆಯಲ್ಲಿ ಬೆಂಗಳೂರಿನ ಪಶ್ಟಿಮ ವಿಭಾಗ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.