- Advertisement -
![]()
- Advertisement -
ಮಂಗಳೂರು: ಉಚ್ಚಿಲ ಬೀಚ್ ರೆಸಾರ್ಟ್ ನಲ್ಲಿ ಸಂಭವಿಸಿದ ಮೂವರು ಯುವತಿಯರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸಾರ್ಟ್ ಮಾಲೀಕ ಹಾಗು ಮ್ಯಾನೇಜರ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮೃತ ಯುವತಿಯರ ಕುಟುಂಬಸ್ಥರು ನೀಡಿದ ದೂರಿನ ಹಿನ್ನೆಲೆಯಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ರೆಸಾರ್ಟ್ ಮಾಲೀಕ ಮನೋಹರ್ ಪುತ್ರನ್ ಹಾಗೂ ಮ್ಯಾನೇಜರ್ ಭರತ್ ಅವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.ಈಗಾಗಲೇ ರೆಸಾರ್ಟ್ ಪರವಾನಗಿಯನ್ನು ರದ್ದುಗೊಳಿಸಲಾಗಿದ್ದು, ತಾತ್ಕಾಲಿಕವಾಗಿ ಸೀಲ್ ಡೌನ್ ಮಾಡಲಾಗಿದೆ.
- Advertisement -


