- Advertisement -
- Advertisement -
ನವದೆಹಲಿ: ಇಲ್ಲಿನ ಮಾಯಾಪುರಿ ಪ್ರದೇಶದಲ್ಲಿರುವ ಮಾಸ್ಕ್ ತಯಾರಿಕಾ ಘಟಕದಲ್ಲಿ ಇಂದು ಮುಂಜಾನೆ ಆಕಸ್ಮಿಕ ಅಗ್ನಿ ಅನಾಹುತ ಸಂಭವಿಸಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಕುರಿತು ವರದಿಯಾಗಿದೆ. ದೆಹಲಿ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ 6 ಅಗ್ನಿಶಾಮಕ ವಾಹನಗಳ ಮೂಲಕ ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿದೆ.
ಈಗಾಗಲೇ ಘಟಕದಲ್ಲಿ ಸಿಲುಕಿಕೊಂಡಿದ್ದ ಮೂವರನ್ನು ರಕ್ಷಿಸಲಾಗಿದೆ. ಮೃತ ವ್ಯಕ್ತಿಯನ್ನು ಜುಗಲ್ ಕಿಶೋರ್ ಎಂದು ಗುರುತಿಸಲಾಗಿದೆ. ಘಟಕದ ಮೂರನೆ ಮಹಡಿಯಲ್ಲಿ ಯಂತ್ರೋಪಕರಣಗಳು ಮತ್ತು ಕಚ್ಚಾ ವಸ್ತುಗಳನ್ನು ಇರಿಸಲಾಗಿದ್ದು , ಅಲ್ಲಿ ಕಾಣಿಸಿಕೊಂಡ ಬೆಂಕಿ ಇಡೀ ಕಟ್ಟಡಕ್ಕೆ ವ್ಯಾಪಿಸಿದೆ.
- Advertisement -