- Advertisement -
- Advertisement -
ಮಂಗಳೂರು; ಬೇಕರಿಯೊಂದರಲ್ಲಿ ಅಗ್ನಿ ಅನಾಹುತ ಸಂಭವಿಸಿ, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿರುವ ಘಟನೆ ಪಾಂಡೇಶ್ವರ ಬಳಿ ನಡೆದಿದೆ.
ಮಂಗಳವಾರ (ಎ.29) ರ ಮುಂಜಾನೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ತಗುಲಿದೆ ಎನ್ನಲಾಗಿದೆ. ಬೆಂಕಿ ಅನಾಹುತದಿಂದ ಐದು ಲಕ್ಷಕ್ಕೂ ಅಧಿಕ ಮೊತ್ತದ ವಸ್ತು ಬೆಂಕಿಗೆ ಅಹುತಿಯಾಗಿದ್ದು, ಲಕ್ಷಾಂತರ ರೂ. ನಷ್ಟವಾಗಿದೆ.ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.
- Advertisement -