- Advertisement -
- Advertisement -
ವಿಟ್ಲ: ಅಂಗಡಿಯಲ್ಲಿ ಭಾರೀ ಬೆಂಕಿ ಅನಾಹುತ ನಡೆದಿರುವ ಘಟನೆ ವಿಟ್ಲ-ಮಂಗಳೂರು ರಸ್ತೆಯಲ್ಲಿರುವ ನತ್ತರಕೆರೆ ನಿವಾಸಿ ಮಹೇಶ್ ಭಟ್ ಅವರಿಗೆ ಸೇರಿದ ಅಂಗಡಿಯಲ್ಲಿ ನಡೆದಿದೆ.
ರಾತ್ರಿ ಅಂಗಡಿಯನ್ನು ಮುಚ್ಚಿ ಅಂಗಡಿ ಮಾಲೀಕ ಮನೆಗೆ ತೆರಳಿದ ಬಳಿಕ ಹೊಗೆ ಕಾಣಿಸಿಕೊಂಡಿದ್ದು ಸ್ಥಳೀಯರು ತಕ್ಷಣ ಜಾಗರೂಕರಾಗಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಪಕ್ಕದ ಅಂಗಡಿ ಮಾಲಕ ಇಸ್ಮಾಯಿಲ್ ಒಕ್ಕೆತ್ತೂರು ಅವರು ತನ್ನ ಅಂಗಡಿಯಲ್ಲಿದ್ದ ಫೈರ್ಗ್ಯಾಸ್ ಮೂಲಕ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಅಂಗಡಿಯಲ್ಲಿದ್ದ ಕೆಲವು ವಸ್ತುಗಳಿಗೆ ಹಾನಿಯಾಗಿವೆ.
- Advertisement -