- Advertisement -
![]()
- Advertisement -
ಮಂಗಳೂರು: ಅಪಾರ್ಟ್ ಮೆಂಟ್ ನಲ್ಲಿ ಕೋಣೆಯೊಳಗೆ ಮಗುವೊಂದು ಬಾಕಿಯಾಗಿ ಅಗ್ನಿಶಾಮಕ ದಳದಿಂದ ರಕ್ಷಣೆ ಮಾಡಲ್ಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರು ನಗರದ ಕೊಡಿಯಾಲ್ ಗುತ್ತಿನಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿ ಈ ಘಟನೆ ಸಂಭವಿಸಿದ್ದು, ಪಾಂಡೇಶ್ವರ ಅಗ್ನಿಶಾಮಕ ದಳದಿಂದ ಮಗುವನ್ನು ರಕ್ಷಣೆ ಮಾಡಲಾಗಿದೆ. ಅಟವಾಡುತ್ತಾ ಕೋಣೆಯೊಳಗೆ ಹೋಗಿ ಬಾಗಿಲಿನ ಚಿಲಕ ಹಾಕಿದ್ದ ಕಾರಣ ಮಗು ಹೊರ ಬರಲಾಗದೇ ಮನೆಯ ಸದಸ್ಯರು ಗಾಬರಿಯಾಗಿದ್ದರು.
ನಂತರ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ ಬಳಿಕ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಹಗ್ಗದ ಸಹಾಯದಿಂದ ನಾಲ್ಕನೇ ಮಹಡಿಯಿಂದ ಮಗುವಿನ ಕೋಣೆಗೆ ತೆರಳಿ ರಕ್ಷಣೆ ಮಾಡಿದ್ದಾರೆ.
- Advertisement -


