- Advertisement -
- Advertisement -
ಉಡುಪಿ: ಸಂತೆಕಟ್ಟೆ ಬಳಿ ಮೀನಿನ ವಾಹನವೊಂದು ಕಂಬಕ್ಕೆ ಡಿಕ್ಕಿ ಹೊಡೆದು ಚಾಲಕ ಮೃತಪಟ್ಟ ಘಟನೆ ನಡೆದಿದೆ.
ರಸ್ತೆಗೆ ಅಡ್ಡಲಾಗಿ ಬಂದ ವೃದ್ಧ ಓರ್ವರನ್ನು ತಪ್ಪಿಸಲು ಹೋಗಿ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ತೌಫೀಕ್ (28) ಮೃತಪಟ್ಟ ಚಾಲಕ. ಹಾಗೇ ಈ ಘಟನೆಯಲ್ಲಿ ವಾಹನದ ಕ್ಲೀನರ್ ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಬಗ್ಗೆ ಉಡುಪಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
- Advertisement -