Thursday, June 4, 2026
Homeಕರಾವಳಿಉಡುಪಿಉಡುಪಿ: ಮೀನುಗಾರಿಕೆ ತೆರಳಿದ್ದ ಮೀನುಗಾರ ಸಮುದ್ರಕ್ಕೆ ಬಿದ್ದು ನಾಪತ್ತೆ

ಉಡುಪಿ: ಮೀನುಗಾರಿಕೆ ತೆರಳಿದ್ದ ಮೀನುಗಾರ ಸಮುದ್ರಕ್ಕೆ ಬಿದ್ದು ನಾಪತ್ತೆ

- Advertisement -
- Advertisement -

ಉಡುಪಿ: ಮೀನುಗಾರಿಕೆ ತೆರಳಿದ್ದ ಮೀನುಗಾರ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿರುವ ಘಟನೆ ಮಲ್ಪೆಯಲ್ಲಿ ನಡೆದಿದೆ.

ಅಂಕೋಲಾ ತಾಲೂಕಿನ ಅಣ್ಣಕೃಷ್ಣ ತಿಮ್ಮಪ್ಪ (48) ನಾಪತ್ತೆಯಾದವರು.

ಡಿ. 25ರಂದು ಬೆಳಗ್ಗಿನ ಜಾವ ಅರಬಿ ಸಮುದ್ರದಲ್ಲಿ 13 ನಾಟಿಕಲ್‌ ಮೈಲು ದೂರದಲ್ಲಿ ಮೀನುಗಾರಿಕೆ ಕೆಲಸ ಮಾಡುತ್ತಿರುವಾಗ ಆಯತಪ್ಪಿ ಬೋಟಿನಿಂದ ನೀರಿಗೆ ಬಿದ್ದು ನಾಪತ್ತೆಯಾಗಿದ್ದರು. ತಕ್ಷಣ ಜತೆಯಲ್ಲಿದ್ದವರು ಹುಡುಕಾಡಿದರೂ ಪತ್ತೆಯಾಗಲಿಲ್ಲ. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!