Monday, May 27, 2024
Homeಕರಾವಳಿನೆಲ್ಯಾಡಿ: ಉದನೆಯಲ್ಲಿ ಮೀನುಗಳ ಸಾವು ಪ್ರಕರಣ: ಮೂವರನ್ನು ವಶಕ್ಕೆ ಪಡೆದ ಪೊಲೀಸರು

ನೆಲ್ಯಾಡಿ: ಉದನೆಯಲ್ಲಿ ಮೀನುಗಳ ಸಾವು ಪ್ರಕರಣ: ಮೂವರನ್ನು ವಶಕ್ಕೆ ಪಡೆದ ಪೊಲೀಸರು

spot_img
- Advertisement -
- Advertisement -

ನೆಲ್ಯಾಡಿ: ಉದನೆಯ ಗುಂಡ್ಯ ಹೊಳೆಯಲ್ಲಿ ಸ್ಫೋಟಕ ಬಳಸಿ ಮೀನು ಹಿಡಿಯಲು ಯತ್ನಿಸಿದ ಪರಿಣಾಮ ನೂರಾರು ಮೀನುಗಳು ಸಾವನ್ನಪ್ಪಿದ್ದು, ಕೃತ್ಯವೆಸಗಿದ ತೆಲಂಗಾಣ ಮೂಲದ ಮೂವರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ತೆಲಂಗಾಣ ಮೂಲದ ವೆಂಕಟೇಶ್, ರಾಮ, ರಾಜು ಎಂಬರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.ಗುಂಡ್ಯ ಹೊಳೆಯ ಉದನೆ ತೂಗು ಸೇತುವೆಯ ಬಳಿ ಮತ್ಸ್ಯ ತೀರ್ಥ ಎಂದೇ ಪರಿಗಣಿತವಾದ ಸ್ಥಳದಲ್ಲಿ ಮೀನುಗಾರಿಕೆಯನ್ನು ನಿಷೇಧಿಸಲಾಗಿದೆ. ಈ ಸ್ಥಳದಲ್ಲಿ ಬುಧವಾರ ಏಕಾಏಕಿ ನೂರಾರು ಮೀನುಗಳು ಸಾವನ್ನಪ್ಪಿರುವುದು ಕಂಡು ಬಂದಿದ್ದು, ಹೊಳೆಗೆ ವಿಷ ಪ್ರಾಶಣ ಮಾಡಿರುವ ಬಗ್ಗೆ ಶಂಕೆ ಮೂಡಿದೆ.

ಈ ಬಗ್ಗೆ ಸ್ಥಳೀಯ ಅರಣ್ಯ ಇಲಾಖೆ ಸಿಬ್ಬಂದಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿದ ಪೊಲೀಸರು ತೆಲಂಗಾಣ ಮೂಲದ ಮೂವರನ್ನು ವಿಚಾರಣೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!