- Advertisement -
- Advertisement -
ಕಾಸರಗೋಡು: ಇಲ್ಲಿನ ಹೊಸದುರ್ಗದ ತರುತ್ತಿಯಲ್ಲಿ ಮೀನುಗಾರಿಕಾ ದೋಣಿ ಮಗುಚಿ ಓರ್ವ ಸಮುದ್ರ ಪಾಲಾದ ಘಟನೆ ನಡೆದಿದೆ.
ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು, ನಾಪತ್ತೆಯಾದ ವ್ಯಕ್ತಿಯನ್ನು ಸೂರಜ್(28) ಎನ್ನಲಾಗಿದೆ. ದೋಣಿಯಲ್ಲಿದ್ದ ಮತ್ತಿಬ್ಬರು ಈಜಿ ದಡ ಸೇರಿದ್ದಾರೆ.
ನಾಪತ್ತೆಯಾದವನಿಗಾಗಿ ಅಗ್ನಿ ಶಾಮಕ ದಳದ ಸಿಬ್ಬಂದಿಗಳು, ಪರಿಸರವಾದಿಗಳು ಹಾಗೂ ಕಂದಾಯ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ಈ ಘಟನೆಯು ನಾಡ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ ಸಂದರ್ಭದಲ್ಲಿ ನಡೆದಿದೆ.
- Advertisement -