Thursday, April 25, 2024
Homeಕರಾವಳಿಉಡುಪಿಉಡುಪಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆ

ಉಡುಪಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆ

spot_img
- Advertisement -
- Advertisement -

ಉಡುಪಿ: ಗೋವಾ-ಮಹಾರಾಷ್ಟ್ರ ಗಡಿ ಭಾಗದ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಮುಳುಗಿದೆ. ಅದೃಷ್ಟವಶಾತ್ ಅದರಲ್ಲಿದ್ದ ಏಳು ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಸಮುದ್ರದಲ್ಲಿ ಮುಳುಗಿದ ದೋಣಿಯು ಮಲ್ಪೆಯದ್ದಾಗಿದ್ದು, ಮಥುರಾ ಹೆಸರಿನ ಈ ಆಳಸಮುದ್ರ ಮೀನುಗಾರಿಕಾ ದೋಣಿಯು ನ. 17ರಂದು ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು, ಸಮುದ್ರದಲ್ಲಿ ಮುಳುಗಿದ ದೋಣಿಯಲ್ಲಿ ಬಲೆ, ಡೀಸೆಲ್, ಮೀನು ಸೇರಿದಂತೆ ಸುಮಾರು 65 ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

ಗೋವಾ-ಮಹಾರಾಷ್ಟ್ರ ರಾಜ್ಯ ಗಡಿಯಲ್ಲಿ ಸಮೀಪಿಸುತ್ತಿದ್ದಾಗ, ಅವಘಡ ಸಂಭವಿಸಿದೆ. ಅದರಲ್ಲಿದ್ದ ಏಳು ಮಂದಿ ಮೀನುಗಾರರನ್ನು ಪಕ್ಕದಲ್ಲೇ ಹೋಗುತ್ತಿದ್ದ ಮಾಹೂರ್ ದೋಣಿಯವರು ರಕ್ಷಿಸಿದ್ದಾರೆ. ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.

- Advertisement -
spot_img

Latest News

error: Content is protected !!