- Advertisement -
- Advertisement -
ನಲ್ಗೊಂಡ : ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಕಾರು ಪಲ್ಟಿಯಾಗಿ ಸ್ಥಳದಲ್ಲೇ ಐದು ಮಂದಿ ಮೃತಪಟ್ಟಿರುವ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯ ಹೈದರಾಬಾದ್-ನಾಗಾರ್ಜುನಸಾಗರ ರಸ್ತೆಯಲ್ಲಿ ಸಂಭವಿಸಿದೆ.
ತಡ ರಾತ್ರಿ ಹೈದರಾಬಾದ್ನಿಂದ ಮಲ್ಲೆಪಲ್ಲಿಗೆ ಹೊರಟಿದ್ದ ಕಾರು ವೇಗವಾಗಿ ಚಲಿಸುತ್ತಿದ್ದ ಕಾರಣ ಪಲ್ಟಿಯಾಗಿದೆ. ಚಾಲಕ ನಿದ್ರೆಯ ಮಂಪರಿನಲ್ಲಿ ಕಾರು ಓಡಿಸುತ್ತಿದ್ದ ಹಾಗೂ ಕಾರು ವೇಗವಾಗಿ ಚಲಾಯಿಸುತ್ತಿದ್ದ ಕಾರಣ ವಾಟರ್ ಪೈಪಲೈನ್ ಘಟಕಕ್ಕೆ ಡಿಕ್ಕಿಯಾಗಿ ಪಲ್ಟಿ ಹೊಡೆದಿದೆ. ಈ ಪರಿಣಾಮ ಐವರು ಮೃತಪಟ್ಟಿದ್ದಾರೆ.
ಮೃತರ ಪೈಕಿ ಮೂವರನ್ನು ಭರತ್, ನಾಗೇಂದ್ರ, ಗಣೇಶ್ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ಕೈಗೊಂಡಿದ್ದಾರೆ.
- Advertisement -