ದೆಹಲಿ: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಪ್ರಯಾಣಿಸುತ್ತಿದ್ದ ವಿಮಾನ ದೆಹಲಿಯಲ್ಲಿ ಪ್ರತಿಕೂಲ ಹವಾಮಾನದ ನಡುವೆ ಸಿಲುಕಿ ಆತಂಕ ಸೃಷ್ಟಿಯಾದ ಘಟನೆ ನಡೆದಿದೆ. ದೆಹಲಿ ಏರ್ ಪೋರ್ಟ್ ನಲ್ಲಿ ಸಂಜೆ ೫ ಗಂಟೆಗೆ ಲ್ಯಾಂಡಿಂಗ್ ಆಗಬೇಕಿದ್ದ ಇಂಡಿಗೋ ವಿಮಾನ ತೀವ್ರ ಮಳೆಯ ಕಾರಣದಿಂದಾಗಿ ಮತ್ತೆ ಟೇಕಾಫ್ ಆಗಿದೆ. ಲ್ಯಾಂಡಿಂಗ್ ಆಗಬೇಕಿದ್ದ ವಿಮಾನ ಅರ್ಧ ಗಂಟೆಗಳ ಕಾಲ ಮತ್ತೆ ಹಾರಾಟ ನಡೆಸಿ ಬಳಿಕ ಲ್ಯಾಂಡಿಂಗ್ ಆಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಉಪಸಭಾಪತಿ ಪ್ರಾಣೇಶ್, ಸಿಎಂ ರಾಜಕೀಯ ಕಾರ್ಯದರ್ಶಿ ಡಿ.ಎನ್. ಜೀವರಾಜ್, ಶಾಸಕ ಬೆಳ್ಳಿಪ್ರಕಾಶ್, ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಅವರು ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಇಂದು ಮಧ್ಯಾಹ್ನ ೨ ಗಂಟೆಗೆ ಇಂಡಿಗೋ ವಿಮಾನ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಹೊರಟಿತ್ತು. ಲ್ಯಾಂಡಿಂಗ್ ಆಗುವ ಕ್ಷಣದಲ್ಲಿ ಮತ್ತೆ ಟೇಕಾಫ್ ಆಗಿದ್ದರಿಂದ ವಿಮಾನದಲ್ಲಿ ಇದ್ದ ಪ್ರಯಾಣಿಕರು ಕೆಲವು ಕಾಲ ಆತಂಕಕ್ಕೊಳಗಾಗಿದ್ದರು.
ನಳೀನ್ ಕುಮಾರ್ ಕಟೀಲ್ ಇದ್ದ ವಿಮಾನ ಲ್ಯಾಂಡಿಂಗ್ ಆಗುವ ವೇಳೆ ಟೇಕಾಫ್: ಕೆಲವು ಕಾಲ ಆತಂಕ ಸೃಷ್ಟಿ
- Advertisement -
- Advertisement -
- Advertisement -