Friday, June 26, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರಿಂದ ದೇವಸ್ಥಾನದಲ್ಲಿ ಅಲಂಕಾರ ಸೇವೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರಿಂದ ದೇವಸ್ಥಾನದಲ್ಲಿ ಅಲಂಕಾರ ಸೇವೆ

- Advertisement -
- Advertisement -

ಬೆಳ್ತಂಗಡಿ : ಹೊಸವರ್ಷಕ್ಕೆ ಬೆಂಗಳೂರಿನ ಭಕ್ತರಾದ ಗೋಪಾಲ ರಾವ್ ಮತ್ತು ಆನಂದ ರಾವ್ ಬಳಗದವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವಸ್ಥಾನದ ಒಳಾಂಗಣ, ಹೊರಾಂಗಣ, ಬೀಡು (ಹೆಗ್ಗಡೆಯವರ ನಿವಾಸ) ಹಾಗೂ ಕಟ್ಟಡಗಳನ್ನು ವಿವಿಧ ಜಾತಿಯ ಹೂಗಳನ್ನು ಮತ್ತು ಎಲೆಗಳನ್ನು ಬಳಸಿ ಆಕರ್ಷಕ ವಿನ್ಯಾಸದಿಂದ ಸಿಂಗರಿಸಿದ್ದಾರೆ.

ಹಳದಿ ಸೇವಂತಿಗೆ, ಬಿಳಿ ಸೇವಂತಿಗೆ, ಕೆಂಪು ಸೇವಂತಿಗೆ, ಗುಲಾಬಿ ಬಟನ್, ರೋಸ್‌ಪೆಟಲ್ಸ್, ಸುಗಂಧರಾಜ ಮೊದಲಾದ ಹೂವುಗಳು ಹಾಗೂ ಸೇಬು, ಮುಸುಂಬಿ ಮತ್ತು ಕಿತ್ತಳೆ ಮೊದಲಾದ ಹಣ್ಣುಗಳು, ವಿವಿಧ ಜಾತಿಯ ಎಲೆಗಳನ್ನು ಬಳಸಿ ಆಕರ್ಷಕ ವಿನ್ಯಾಸದಲ್ಲಿ ಅಲಂಕಾರ ಮಾಡಿದ್ದಾರೆ.

ಕಳೆದ ನಾಲ್ಕು ದಿನಗಳಿಂದ 150 ಮಂದಿ ಸ್ವಯಂಸೇವಕರಾಗಿ ಅಲಂಕಾರ ಸೇವೆಯನ್ನು ಮಾಡಿ ಧನ್ಯತೆಯನ್ನು ಹೊಂದಿದ್ದಾರೆ.

- Advertisement -

Latest News

error: Content is protected !!