- Advertisement -
![]()
- Advertisement -
ಕಾರ್ಕಳ: ಹೊಳೆ ಬದಿ ಎಸೆದ ಅವಧಿ ಮೀರಿದ ಆಹಾರವನ್ನು ತಿಂದು 5 ಹಸುಗಳು ಮೃತಪಟ್ಟ ಘಟನೆ ಕಾರ್ಕಳದಲ್ಲಿ ನಡೆದಿದೆ.
ಇಲ್ಲಿನ ಜೋಹಲ್ಬೆಟ್ಟು ನದಿಯ ಹತ್ತಿರ ಸುಮಾರು 25 ಗೋಣಿ ಕಡಲೆ ಹಿಟ್ಟನ್ನು ಬಿಸಾಕಿ ಹೋಗಿದ್ದು, ಇದನ್ನು ತಿಂದ ಐದು ಹಸುಗಳು ಸಾವನ್ನಪ್ಪಿವೆ. ಸುಮಾರು 25-30 ಹಸುಗಳು ಅಸ್ವಸ್ಥಗೊಂಡಿವೆ.
ಪಾಪಿಗಳ ಕೃತ್ಯಕ್ಕೆ ಮೂಕ ಪ್ರಾಣಿಗಳು ಬಲಿಯಾಗಿವೆ. ಘಟನೆಗೆ ಸಂಬಂಧಿಸಿ ವ್ಯಾಪಕ ಟೀಕೆ ವ್ಯಕ್ತವಾಗಿದೆ. ತಕ್ಷಣವೇ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ವಹಿಸಬೇಕು ಎಂದು ಸ್ಥಳೀಯರು, ಹಿಂದೂ ಸಂಘಟನೆಯವರು ಆಗ್ರಹಿಸಿದ್ದಾರೆ.
- Advertisement -


